ಪಡುಬಿದ್ರಿ; ತಡೆಬೇಲಿಗೆ ಸ್ಕೂಟರ್ ಢಿಕ್ಕಿ: ಸವಾರ ಮೃತ್ಯು

Update: 2022-08-11 17:42 GMT

ಪಡುಬಿದ್ರಿ: ಹೆದ್ದಾರಿ ಬದಿ ಅಳವಡಿಸಿದ್ದ ಕಬ್ಬಿಣ ತಡೆಬೇಲಿಗೆ ಸ್ಕೂಟರ್ ಢಿಕ್ಕಿಯಾಗಿ ಸವಾರ ಮೃತಪಟ್ಟ ಘಟನೆ ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ನಡೆದಿದೆ.

ಪಂಜಾಬ್‍ನ ರಾಜ್‍ ಕಿಶೋರ್ (28) ಮೃತರು ಎಂದು ಗುರುತಿಸಲಾಗಿದೆ. ನಂದಿಕೂರು ಕೈಗಾರಿಕಾ ಪ್ರದೇಶದ ಆಹಾರ ಸಂಸ್ಕರಣಾ ಘಟಕದಲ್ಲಿ ಕರ್ತವ್ಯದಲ್ಲಿದ್ದ ರಾಜ್‍ ಕಿಶೋರ್ ಸ್ಕೂಟರ್‌ ನಲ್ಲಿ ಪಡುಬಿದ್ರಿಯ ಕಿಶೋರ್ ಎಂಬವರನ್ನು ಸಹಸವಾರನ್ನಾಗಿಸಿಕೊಂಡು ಬೆಳ್ಮಣ್‍ನಿಂದ ಪಡುಬಿದ್ರಿ ಕಡೆ ಬರುತ್ತಿದ್ದಾಗ ಸ್ಕೂಟರ್ ನಿಯಂತ್ರಣ ಕಳೆದುಕೊಂಡು ತಡೆಬೇಲಿಗೆ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು.

ತಕ್ಷಣ ಅವರನ್ನು ಕಾರ್ಕಳ ತಾಲೂಕು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ. ಸಹಸವಾರ ಕಿಶೋರ್ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News