ಜೆಪ್ಪಿನಮೊಗರು | ಅಪರಿಚಿತ ವಾಹನ ಢಿಕ್ಕಿ: ರಸ್ತೆ ಬದಿ ಹುಲ್ಲು ಕಟಾವ್ ಮಾಡುತ್ತಿದ್ದ ಕಾರ್ಮಿಕ ಮೃತ್ಯು

Update: 2022-08-12 05:13 GMT

ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪಿನಮೊಗರು ಬಳಿ ರಸ್ತೆಬದಿಯಲ್ಲಿ ಬೆಳೆದಿದ್ದ ಗಿಡಗಂಟೆಗಳನ್ನ ಕಡಿದು ಸ್ವಚ್ಛತೆಯಲ್ಲಿ ನಿರತರಾಗಿದ್ದ ಕಾರ್ಮಿಕರಿಬ್ಬರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ನಡೆದಿರುವುದು ವರದಿಯಾಗಿದೆ.

ಮೃತರನ್ನು ಬಿಹಾರ ಜಾಮೂಲ್ ನಿವಾಸಿ ವಿಕ್ಕಿ ಖಾನ್(23) ಎಂದು ಗುರುತಿಸಲಾಗಿದೆ. ಸಾಸ್ತಾನ ನಿವಾಸಿ ಗೋಪಾಲ ಪೂಜಾರಿ(53) ಎಂಬವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 ವಿಕ್ಕಿ ಖಾನ್ ಮತ್ತು ಗೋಪಾಲ ಪೂಜಾರಿ ಇಂದು ಬೆಳಗ್ಗೆ 8 ಗಂಟೆ ಸುಮಾರಿಗೆ ಹೆದ್ದಾರಿ ಬಳಿಯ ಹುಲ್ಲುಗಳನ್ನು ಕಟಾವ್ ಮಾಡುತ್ತಿದ್ದ ವೇಳೆ ತೊಕ್ಕೊಟ್ಟು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ವಾಹನ ಢಿಕ್ಕಿ ಹೊಡೆದಿದೆ. ಪಿಕಪ್ ವಾಹನದ ಮೇಲೆ ಸಂಶಯ ವ್ಯಕ್ತಪಡಿಸಿರುವ ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಈ ಬಗ್ಗೆ ನಾಗುರಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News