ಮುಂದುವರಿದ ಭಾರೀ ಮಳೆ: ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ರಜೆ

Update: 2022-08-12 04:58 GMT

ಚಿಕ್ಕಮಗಳೂರು, ಆ.12: ಮಲೆನಾಡು ಭಾಗದಲ್ಲಿ ಭಾರೀ ಬಿರುಗಾಳಿ, ಮಳೆ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಶಾಲೆಗಳಿಗೆ ಶುಕ್ರವಾರ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: ಬಿಜೆಪಿ ನಮ್ಮನ್ನು ಕೈಬಿಟ್ಟಿದೆ: ಮಹಿಳೆ ಮೇಲೆ ಹಲ್ಲೆ ಪ್ರಕರಣದಲ್ಲಿ ಬಂಧಿತ ಶ್ರೀಕಾಂತ್ ತ್ಯಾಗಿ ಪತ್ನಿ ಆರೋಪ

ಅಂಗನವಾಡಿಯಿಂದ ಹತ್ತನೇ ತರಗತಿವರೆಗೆ ಇಂದು ರಜೆ ಘೋಷಿಸಿ ತಹಶೀಲ್ದಾರ್ ನಾಗರಾಜ್ ಆದೇಶಿಸಿದ್ದಾರೆ.

ಭಾರೀ ಗಾಳಿ ಮಳೆಗೆ ಉರುಳಿ ಬಿದ್ದ ಅಡಿಕೆ ಮರಗಳು

ಮೂಡಿಗೆರೆ ತಾಲೂಕಿನ ಕನ್ನೆಹಳ್ಳಿ ಗ್ರಾಮದಲ್ಲಿ ಭಾರೀ ಗಾಳಿಮಳೆಗೆ ಹರೀಶ್ ಎಂಬವರಿಗೆ ಸೇರಿದ ಅಡಿಕೆ ತೋಟಕ್ಕೆ ಹಾನಿ ಸಂಭವಿಸಿದೆ. ಮಳೆ-ಗಾಳಿಯ ಅಬ್ಬರಕ್ಕೆ ಹಲವು ಅಡಿಕೆ ಮರಗಳು ಮುರಿದುಬಿದ್ದಿವೆ.

ಬಿರುಗಾಳಿ ಮಳೆಗೆ ಮೆಣಸು ಬೆಳೆಗೂ ಹಾನಿಯಾಗಿರುವುದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News