ರಾಷ್ಟ್ರಧ್ವಜಕ್ಕೆ ಅಪಮಾನ ಆರೋಪ: ಸಚಿವ ಬಿ.ಸಿ ನಾಗೇಶ್ ಸ್ಪಷ್ಟನೆ

Update: 2022-08-12 06:01 GMT

ಬೆಂಗಳೂರು: ಬುಧವಾರ ತಿಪಟೂರಿನಲ್ಲಿ ನಡೆದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜಕ್ಕಿಂತ ಎತ್ತರದಲ್ಲಿ ಎಬಿವಿಪಿ ಧ್ವಜ ಹಿಡಿದು ರಾಷ್ಟ್ರಕ್ಕೆ ಅವಮಾನಿಸಲಾಗಿದೆ ಎಂಬ ತನ್ನ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ.ನಾಗೇಶ್‌ ಸ್ಪಷ್ಟನೆ ನೀಡಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಬಿ.ಸಿ ನಾಗೇಶ್, ''ರಾಷ್ಟ್ರಧ್ವಜದ ಬಣ್ಣಗಳೇ ತಿಳಿಯದವರು, ದಿಕ್ಕು ತಪ್ಪಿಸಲೆಂದೇ ಒಂದು ಚಿತ್ರವನ್ನು ಬಳಸಿಕೊಂಡು ಸುಳ್ಳಿನ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ'' ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:  ರಾಷ್ಟ್ರಧ್ವಜಕ್ಕೆ ಅಪಮಾನ ಆರೋಪ: ​ಶಿಕ್ಷಣ ಸಚಿವ ಬಿ.ಸಿ ನಾಗೇಶ್ ವಿರುದ್ಧ ದೂರು

''ಹತಾಶೆಯಿಂದ ಸುಳ್ಳು ಹೇಳುವುದನ್ನೆ ಅವರು ಅಜೆಂಡಾ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಆದರೆ, ಈ ನೈಜ ಚಿತ್ರಗಳು ಅವರ ಹಸಿ ಹಸಿ ಸುಳ್ಳುಗಳನ್ನು ಬಯಲು ಮಾಡುತ್ತವೆ'' ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News