ಕುಂದಾಪುರ | ರಸ್ತೆ ಅಪಘಾತಕ್ಕೆ ಹೆಮ್ಮಾಡಿ ಸರಕಾರಿ ಶಾಲೆಯ ಶಿಕ್ಷಕಿ ಬಲಿ

Update: 2022-08-12 10:28 GMT

ಕುಂದಾಪುರ, ಆ.12: ರಸ್ತೆ ಅಪಘಾತ(Accident)ದಿಂದ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಹೆಮ್ಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ.

ಮುದೂರು ಸೆಳ್ಕೋಡು ನಿವಾಸಿ, ಹೆಮ್ಮಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಅಂಬಿಕಾ (32) ಮೃತಪಟ್ಟವರಾಗಿದ್ದಾರೆ.

ಇದನ್ನೂ ಓದಿ: ಉಳ್ಳಾಲ: ಖಾಸಗಿ ಶಾಲೆಯ ಶಿಕ್ಷಕಿ ಆತ್ಮಹತ್ಯೆ

ಘಟನೆ ವಿವರ: ಅಂಬಿಕಾ ಅವರ ಪತಿ ಶ್ರೀಕಾಂತ್ ನಾವುಂದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದು, ಗುರುವಾರ ಬೆಳಗ್ಗೆ ದಂಪತಿ ಮುದೂರಿನ ಮನೆಯಿದ ಬೈಕಿನಲ್ಲಿ ಶಾಲೆಗೆ ಹೊರಟಿದ್ದರು. ವಂಡ್ಸೆ ಸಮೀಪ ಏಕಾಏಕಿ ರಸ್ತೆಯಲ್ಲಿ ದನವೊಂದು ಅಡ್ಡಬಂದ ಪರಿಣಾಮ ಬೈಕ್ ಶ್ರೀಕಾಂತ್ ಅವರ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ. ಈ ವೇಳೆ ರಸ್ತೆಗೆ ಎಸೆಯಲ್ಪಟ್ಟ ಅಂಬಿಕಾ ಅವರ ತಲೆಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಕೂಡಲೇ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ರಾತ್ರಿ ವೇಳೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

 ಮೃತರಿಗೆ ಒಂದೂವರೆ ವರ್ಷ ವಯಸ್ಸಿನ ಮಗುವಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News