ಬೆಂಗಳೂರು; ಮಾತುಕತೆಗೆಂದು ಕರೆದು ಲೈಂಗಿಕ ದೌರ್ಜನ್ಯ: ಪ್ರಕರಣ ದಾಖಲು

Update: 2022-08-12 13:12 GMT

ಬೆಂಗಳೂರು, ಆ. 12: ಉದ್ಯಮ ಕುರಿತು ಮಾತುಕತೆಗೆಂದು ಯುವತಿಯೊಬ್ಬರನ್ನು ಹೊಟೇಲ್‍ಗೆ ಕರೆಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದ್ದು, ಈ ಸಂಬಂಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಮಿಳುನಾಡಿನ ಉದ್ಯಮಿ ಆಗಿರುವ ಆರೋಪಿ, ಇತ್ತೀಚೆಗೆ ನಗರಕ್ಕೆ ಬಂದಿದ್ದ. ಸಂಬಂಧಿಕರೊಬ್ಬರ ಮೂಲಕ ಯುವತಿಯನ್ನು ಸಂಪರ್ಕಿಸಿದ್ದ. ಉದ್ಯಮ ಅಭಿವೃದ್ಧಿ ಬಗ್ಗೆ ಮಾತನಾಡಬೇಕೆಂದು ಹೇಳಿ ಆಗಸ್ಟ್ 6ರಂದು ಯುವತಿಯನ್ನು ಹೊಟೇಲ್‍ಗೆ ಕರೆಸಿಕೊಂಡಿದ್ದ.  ಇದೇ ವೇಳೆ ಯುವತಿ ಜೊತೆ ಅನುಚಿತವಾಗಿ ವರ್ತಿಸಿ, ಲೈಂಗಿಕ ದೌರ್ಜನ್ಯ ಎಸಗಿದ್ದ. ನಂತರ, ಜೀವ ಬೆದರಿಕೆಯೊಡ್ಡಿದ್ದ. ಆತನಿಂದ ತಪ್ಪಿಸಿಕೊಂಡಿದ್ದ ಯುವತಿ, ಸಂಬಂಧಿಕರಿಗೆ ವಿಷಯ ತಿಳಿಸಿದ್ದರು. ನಂತರ ಠಾಣೆಗೆ ಬಂದು ದೂರು ನೀಡಿದರು ಎಂದು ಪೊಲೀಸರು ಮಾಹಿತಿ ನೀಡಿದರು.

ನಗರದ ನಿವಾಸಿಯಾಗಿರುವ ಯುವತಿ ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ ಹಾಗೂ ಜೀವ ಬೆದರಿಕೆ ಆರೋಪದಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತಮಿಳುನಾಡಿನ ನಿವಾಸಿಯಾಗಿರುವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News