ರಾಜ್ಯದಲ್ಲಿ ಶುಕ್ರವಾರ 2,032 ಮಂದಿಗೆ ಕೊರೋನ ದೃಢ, ಐವರು ಮತ್ಯು

Update: 2022-08-12 14:37 GMT

ಬೆಂಗಳೂರು, ಆ.12: ರಾಜ್ಯದಲ್ಲಿ ಶುಕ್ರವಾರ 2,032 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಐವರು ಮೃತಪಟ್ಟಿದ್ದು, 1,686 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 40,28,117ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,139ಕ್ಕೆ ತಲುಪಿದೆ.       
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 10,395ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.  

ಐವರ ಸಾವು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಐವರು ಮೃತಪಟ್ಟಿದ್ದು, ಬಳ್ಳಾರಿ 2, ಧಾರವಾಡ 1, ಕೊಪ್ಪಳ 1, ಉತ್ತರಕನ್ನಡ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.  

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 2,032 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 18, ಬಳ್ಳಾರಿ 63, ಬೆಳಗಾವಿ 45, ಬೆಂಗಳೂರು ಗ್ರಾಮಾಂತರ 60, ಬೆಂಗಳೂರುನಗರ 1202, ಚಾಮರಾಜನಗರ 17, ಚಿಕ್ಕಬಳ್ಳಾಪುರ 12, ಚಿಕ್ಕಮಗಳೂರು 1, ಚಿತ್ರದುರ್ಗ 6, ದಕ್ಷಿಣಕನ್ನಡ 14, ದಾವಣಗೆರೆ 39, ಧಾರವಾಡ 75, ಗದಗ 1, ಹಾಸನ 77, ಹಾವೇರಿ 12, ಕಲಬುರಗಿ 34, ಕೊಡಗು 25, ಕೋಲಾರ 36, ಕೊಪ್ಪಳ 15, ಮಂಡ್ಯ 31, ಮೈಸೂರು 132, ರಾಯಚೂರು 35, ರಾಮನಗರ 17, ಶಿವಮೊಗ್ಗ 29, ತುಮಕೂರು 13, ಉಡುಪಿ 7, ಉತ್ತರಕನ್ನಡ 12, ವಿಜಯಪುರ 1, ಯಾದಗಿರಿ  ಜಿಲ್ಲೆಯಲ್ಲಿ 3 ಪ್ರಕರಣ ಪತ್ತೆಯಾಗಿವೆ. 

 ರಾಜಧಾನಿಯಲ್ಲಿ 1,202 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಶುಕ್ರವಾರದಂದು 1,202 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 1,145 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 18,50,049 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,978 ಜನರು ಸೋಂಕಿಗೆ ಬಲಿಯಾಗಿದ್ದಾರೆ. 
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News