ಕುಂದಾಪುರ; ಹಲವು ದೇವಾಲಯಗಳಲ್ಲಿ ಕಳ್ಳತನದ ಆರೋಪಿ ಕರುಣಾಕರ ದೇವಾಡಿಗ ಸೆರೆ

Update: 2022-08-12 16:49 GMT

ಗಂಗೊಳ್ಳಿ, ಆ.12: ಗಂಗೊಳ್ಳಿ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾದ ಆರೋಪಿಯ ಕುಂದಾಪುರ ತಾಲೂಕಿನ ಹಲವು ದೇವಾಲಯಗಳಲ್ಲಿ ಕಳ್ಳತನ ಮಾಡಿರುವ ಅಂಶ ಬೆಳಕಿಗೆ ಬಂದಿದೆ.

ಗಂಗೊಳ್ಳಿ ಠಾಣೆಯ ಪಿಎಸ್‌ಐ ವಿನಯ ಕೊರ್ಲಹಳ್ಳಿ ಅವರ ನೇತೃತ್ವದ ತಂಡ ಪ್ರಕರಣದ ವಿಚಾರಣೆ ನಡೆಸಿ ಬೈಂದೂರು ತಾಲೂಕು ಕಂಬದಕೋಣೆ ಗ್ರಾಮದ ಕರುಣಾಕರ ದೇವಾಡಿಗ (23) ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆತ ಬೈಂದೂರು ಠಾಣೆ ವ್ಯಾಪ್ತಿಯ ತೆಗ್ಗರ್ಸೆ ಗ್ರಾಮದ ಚಂದಣ ಎಂಬಲ್ಲಿರುವ ಸೋಮಲಿಂಗೇಶ್ವರ ದೇವಸ್ಥಾನದಲ್ಲಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿತ್ತು.

ಇನ್ನಷ್ಟು ವಿಚಾರಣೆ ನಡೆಸಿದಾಗ ಕೊಲ್ಲೂರು ಠಾಣೆ ವ್ಯಾಪ್ತಿಯ ಹೊಸೂರು ಎಂಬಲ್ಲಿರುವ ದೇವಸ್ಥಾನದಲ್ಲಿ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದು, ಗುರುವಾರ ಆತನನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News