ದಾಂಡೇಲಿ: ಮೀನು ಹಿಡಿಯುತ್ತಿದ್ದ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ !

Update: 2022-08-13 14:31 GMT

ದಾಂಡೇಲಿ: ಮೀನು ಹಿಡಿಯುತ್ತಿದ್ದ ವ್ಯಕ್ತಿಯನ್ನು ಮೊಸಳೆಯೊಂದು ಎಳೆದೊಯ್ದ ಘಟನೆ ನಗರದ ಅಲೈಡ್ ಸಮೀಪ ಶನಿವಾರ ಸಂಜೆ ನಡೆದಿದೆ.

ಸುರೇಶ್ ವಸಂತ ತೇಲಿ (44) ಮೊಸಳೆ ದಾಳಿಗೊಳಗಾದವರು.

ವಿರ್ನೋಲಿ ನದಿ ಪಕ್ಕ ಮೀನು ಹಿಡಿಯುತ್ತಿದ್ದ ಸುರೇಶ್ ವಸಂತ ತೇಲಿ ಅವರನ್ನು ಮೊಸಳೆಯು ನೀರಿಗೆ ಎಳೆದುಕೊಂಡಿದೆ. ಅವರಿಗಾಗಿ ನದಿಯಲ್ಲಿ, ದೋಣಿ ಮತ್ತು ಡ್ರೋನ್ ಕ್ಯಾಮೆರಾ ಬಳಸಿ ಶೋಧ ಕಾರ್ಯ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿಮಧ್ಯಪ್ರದೇಶ: ಚಂಬಲ್ ನದಿಯಲ್ಲಿ ಸ್ನಾನಕ್ಕೆ ಇಳಿದ ಬಾಲಕನನ್ನು ನುಂಗಿದ ಮೊಸಳೆ  

ಘಟನಾ ಸ್ಥಳದಲ್ಲಿ ರೆಸ್ಕ್ಯೂ ತಂಡ ಮತ್ತು ಪೊಲೀಸರು ಶೋಧ ನಡೆಸುತ್ತಿದ್ದಾರೆ. ಡಿವೈಎಸ್ಪಿ ಕೆ.ಎಲ್ ಗಣೇಶ್ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಬಗ್ಗೆ ದಾಂಡೇಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News