ವಿದ್ಯಾರ್ಥಿ ಯುವಜನ ಸ್ವಾತಂತ್ರ್ಯ ಪ್ರಶಿಕ್ಷಕರ ತರಬೇತಿ ಉದ್ಘಾಟನೆ

Update: 2022-08-13 15:04 GMT

ಉಡುಪಿ, ಆ.13: ಮಂಗಳೂರು ವಿಶ್ವವಿದ್ಯಾನಿಲಯ ಮತ್ತು ಉಡುಪಿ ಎಂಜಿಎಂ ಕಾಲೇಜುಗಳ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಪ್ರಯುಕ್ತ ಉಡುಪಿ ಘಟಕ ಮಟ್ಟದ ವಿದ್ಯಾರ್ಥಿ ಯುವಜನ ಸ್ವಾತಂತ್ರ್ಯ ಪ್ರಶಿಕ್ಷಕರ ತರಬೇತಿ’ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಶುಕ್ರವಾರ ನಡೆಯಿತು.

ಸಮಾರಂಭವನ್ನು ಅಭಿಯಾನಂ, ಸಾಂಸ್ಥಿಕ ಅಭಿವೃದ್ಧಿ ಹಾಗೂ ಮಾನವ ಸಂಪದ್ವಿಕಾಸ ಹಾಗೂ ಸಂಶೋಧನೆ ಮತ್ತು ಪ್ರಶಿಕ್ಷಣ ಸಂಸ್ಥೆಯ ನಿರ್ದೇಶಕ ಡಾ. ಶಿಕಾರಿಪುರ ಕೃಷ್ಣಮೂರ್ತಿ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು.

ಸಂಪನ್ಮೂಲ ವ್ಯಕ್ತಿಗಳಾದ ಬಿ.ಎಸ್.ಶಾಸ್ತ್ರಿ, ಸಚೇತಾ ನಂದ ಗೋಪಾಲ್, ಮೇಜರ್ ರಾಧಾಕೃಷ್ಣ, ಕಾಲೇಜಿನ ಐಕ್ಯೂಎಸಿ ಸಂಯೋಜಕ ಪ್ರೊ.ಅರುಣ್ ಕುಮಾರ್ ಬಿ., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ರಮೇಶ್ ಕಾರ್ಲ ಉಪಸ್ಥಿತರಿದ್ದರು.

ನೋಡಲ್ ಅಧಿಕಾರಿ ಡಾ.ಎಂ.ವಿಶ್ವನಾಥ ಪೈ ಸ್ವಾಗತಿಸಿದರು. ಕಂಪ್ಯೂಟರ್ ಸೈನ್ಸ್ ಉಪನ್ಯಾಸಕಿ ಪೂರ್ಣಿಮಾ ಶೆಟ್ಟಿ ವಂದಿಸಿದರು. ಪತ್ರಿಕೋದ್ಯಮ ಉಪನ್ಯಾಸಕ ಸುಚಿತ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News