ಹನಿಟ್ರ್ಯಾಪ್ ಆರೋಪ: ಕನ್ನಡ ಚಿತ್ರರಂಗದ ಯುವನಟನ ಬಂಧನ

Update: 2022-08-13 16:31 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.13: ಹನಿಟ್ರ್ಯಾಪ್ (Honey trap) ಆರೋಪದಡಿ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ(actor)ನನ್ನು ಇಲ್ಲಿನ ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಜೆಪಿ ನಗರ ನಿವಾಸಿ ಯುವರಾಜ್ ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿ ಇತ್ತೀಚೆಗೆ ಪರಿಚಯ ಆಗಿದ್ದ ಇಬ್ಬರು ಯುವತಿಯರ ಹೆಸರು ಬಳಸಿ ಸಂದೇಶ ಕಳುಹಿಸಿದ್ದರು. ನಂತರ ಉದ್ಯಮಿಗೆ ಯುವರಾಜ್ ಭೇಟಿಯಾಗಿ ನಾವು ಪೊಲೀಸರು ಎಂದು ಹೇಳಿ ಹೆದರಿಸಿದ್ದರು. ಯುವತಿಯರ ಜೊತೆಗೆ ಅಶ್ಲೀಲ ಸಂದೇಶ ಕುರಿತು ನಿಮ್ಮ ಮೇಲೆ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಮುಂದುವರೆಸದಿರಲು ಹಣ ನೀಡುವಂತೆ ಬೇಡಿಕೆಯಿಟ್ಟಿದ್ದರು ಎನ್ನುವ ಮಾಹಿತಿ ಗೊತ್ತಾಗಿದೆ.

ಉದ್ಯಮಿಯಿಂದ ಮೊದಲು 50 ಸಾವಿರ ಪಡೆದ ಆರೋಪಿ, ನಂತರ ಬ್ಯಾಂಕ್‍ನಲ್ಲಿ 3 ಲಕ್ಷ ರೂ. ಡ್ರಾ ಮಾಡಿಸಿಕೊಂಡಿದ್ದ. ಹಂತಹಂತವಾಗಿ ಆರೋಪಿ ಯುವರಾಜ್‍ ಒಟ್ಟು 14 ಲಕ್ಷಕ್ಕೂ ಹೆಚ್ಚಿನ ಹಣ ವಸೂಲಿ ಮಾಡಿದ್ದಾನೆ. ಇದರಿಂದ ಬೇಸತ್ತ ಸಂತ್ರಸ್ತ ಉದ್ಯಮಿ ಹಲಸೂರು ಗೇಟ್ ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಆರೋಪಿ ಯುವರಾಜ್‍ನನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿವೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: ಸರಕಾರ ನಡೆಸುತ್ತಿಲ್ಲ, ಮ್ಯಾನೇಜ್ ಮಾಡ್ತೀದ್ದೀವಿ ಅಷ್ಟೇ: ಸಚಿವ ಮಾಧುಸ್ವಾಮಿ ಅವರದ್ದೆನ್ನಲಾದ ಆಡಿಯೋ ವೈರಲ್

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News