ಶಿವಮೊಗ್ಗ: ಪಾಲಿಕೆ ಆಯುಕ್ತರ ಕರ್ತವ್ಯಕ್ಕೆ ಅಡ್ಡಿ ಆರೋಪ; ಶರೀಫ್ ಗೆ ಆ. 26 ರವರೆಗೆ ನ್ಯಾಯಾಂಗ ಬಂಧನ

Update: 2022-08-14 14:15 GMT
ಸಾಂದರ್ಭಿಕ ಚಿತ್ರ

ಶಿವಮೊಗ್ಗ: ಪಾಲಿಕೆ ಆಯುಕ್ತರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿ ಬಂಧನಕ್ಕೊಳಗಾದ ಕನ್ನಡಿಗರ ಜನಪರ ವೇದಿಕೆಯ ಮುಖಂಡ ಎಂ.ಡಿ. ಶರೀಫ್ ಯಾನೆ ಆಸೀಪ್ ಗೆ ಆ. 26 ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.

ಶನಿವಾರ ಶಿವಪ್ಪ ನಾಯಕ ಸಿಟಿ ಸೆಂಟರ್ ಮಾಲ್ ನಲ್ಲಿ ಸಾವರ್ಕರ್ ಭಾವಚಿತ್ರಕ್ಕೆ ಆಕ್ಷೇಪ ವ್ಯಕ್ತಪಡಿಸಿ ಭಾವಚಿತ್ರವನ್ನು ತೆಗೆಸಿದ ಎಂ.ಡಿ ಷರೀಫ್ ರ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪಾಲಿಕೆ ಆಯುಕ್ತರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧಿಸಲಾಗಿತ್ತು.

ಇಂದು ಶಿವಮೊಗ್ಗದ ನ್ಯಾಯಾಲಯದ‌ಲ್ಲಿ ಪೊಲೀಸರು ಹಾಜರುಪಡಿಸಿದ್ದರು. ಶರೀಫ್ ಗೆ ಆ.26 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಆದೇಶಿಸಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News