ಸ್ವಾತಂತ್ರ್ಯ ದಿನಾಚರಣೆ; ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ ಧ್ವಜಾರೋಹಣ

Update: 2022-08-15 05:10 GMT

ಉಡುಪಿ: ದೇಶದ ಅಮೃತ ಮಹೋತ್ಸವ ಸ್ವಾತಂತ್ರ್ಯೋತ್ಸವದ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬೈಂದೂರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ ಅವರು ನಗರದ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸಿದರು.

ಅಜ್ಜರಕಾಡಿನಲ್ಲಿರುವ ಹುತಾತ್ಮರ ಸ್ಮಾರಕದಲ್ಲಿ ದೇಶಕ್ಕಾಗಿ ಮಡಿದ ಹುತಾತ್ಮರಿಗೆ ಗೌರವ ಸಲ್ಲಿಸಿದ ಸಚಿವರು, ಬಳಿಕ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಧ್ವಜಾರೋಹಣ ನೆರವೇರಿಸಿ, ಗೌರವ ರಕ್ಷೆ ಸ್ವೀಕರಿಸಿ ಪಥ ಸಂಚಲನವನ್ನು ವೀಕ್ಷಿಸಿದರು.

ನಂತರ ಸ್ವಾತಂತ್ರೋತ್ಸವ ಸಂದೇಶ ನೀಡಿದರು. ಜಿಲ್ಲೆಯ ವಿವಿಧ ಬೀಚ್‌ಗಳ ಅಭಿವೃದ್ಧಿಗೆ 25 ಕೋಟಿ ರೂ. ಮಂಜೂರಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಇತ್ತೀಚಿನ ಕಾಮನ್ವೆಲ್ತ್ ಗೇಮ್ಸ್‌ನ ವೆಯ್ಟ್‌ ಲಿಫ್ಟಿಂಗ್‌ನಲ್ಲಿ ಕಂಚಿನ ಪದಕ ಪಡೆದ ಗುರುರಾಜ್ ಪೂಜಾರಿ ಇವರನ್ನು ಜಿಲ್ಲಾಡಳಿತದ ವತಿಯಿಂದ ಸನ್ಮಾನಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News