ಉಡುಪಿ ಜಿಲ್ಲಾ ಪತ್ರಿಕಾ ಭವನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
Update: 2022-08-15 05:09 GMT
ಉಡುಪಿ, ಆ.15: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸ್ವಾತಂತ್ರೋತ್ಸವ ದಿನವನ್ನು ಉಡುಪಿ ಜಿಲ್ಲಾ ಪತ್ರಿಕಾ ಭವನದಲ್ಲಿ ಆಚರಿಸಲಾಯಿತು
ಸಂಘದ ಜಿಲ್ಲಾಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಧ್ವಜಾರೋಹಣ ನೆರವೇರಿಸಿ ಸ್ವಾಂತ್ರೋತ್ಸವದ ಸಂದೇಶ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಹರೀಶ್ ಸುವರ್ಣ, ಮೈಕಲ್ ರೋಡ್ರಿಗಸ್, ಪರೀಕ್ಷಿತ್ ಶೇಟ್, ವಾರ್ತಾಇಲಾಖೆಯ ಶಿವಕುಮಾರ್ ಮತ್ತು ಹರೀಶ್ ಪಿ., ಜಯಂತ್ ಮೊದಲಾದವರು ಉಪಸ್ಥಿತರಿದ್ದರು