ಸ್ವಾತಂತ್ರ್ಯದ ಅಮೃತ ಮಹೋತ್ಸವ; ಚಾಮರಾಜಪೇಟೆ ಮೈದಾನದಲ್ಲಿ ಐತಿಹಾಸಿಕ ಧ್ವಜಾರೋಹಣ

Update: 2022-08-15 05:16 GMT

ಬೆಂಗಳೂರು, ಆ.15: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇಂದು ಬೆಳಗ್ಗೆ  ಸ್ವಾತಂತ್ರ್ಯ ಅಮೃತ ಮಹೋತ್ಸವದ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿಲಾಯಿತು. 

ಇದೇ ಪ್ರಥಮ ಬಾರಿಗೆ ಈ ಮೈದಾನದಲ್ಲಿ ಸರ್ಕಾರದಿಂದ ಆಯೋಜಿಸಿದ್ದ ಧ್ವಜಾರೋಹಣವನ್ನು ಉಪವಿಭಾಗಾಧಿಕಾರಿಗಳಾದ ಡಾ.ಎಂ. ಜಿ. ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಪಿ.ಸಿ. ಮೋಹನ್, ಶಾಸಕರಾದ ಝಮೀರ್ ಅಹ್ಮದ್, ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸಂದೀಪ್ ಪಾಟೀಲ್, ಉಪ ಪೊಲೀಸ್ ಆಯುಕ್ತರಾದ ಲಕ್ಮಣ ಲಿಂಬರಗಿ ಉಪಸ್ಥಿತರಿದ್ದರು.

ಚಾಮರಾಜಪೇಟೆ ಸರ್ಕಾರಿ ಶಾಲಾ ಮಕ್ಕಳು ವಿವಿಧ ದೇಶ ಭಕ್ತಿ ಕುರಿತ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು. 9 ನೇ ತರಗತಿಯ ಸಿಂಚನ ಮತ್ತು ತಂಡ ಒನಕೆ ಓಬವ್ವ ಕಿರು ನಾಟಕ ಪ್ರದರ್ಶನ ಮಾಡಿದರು. ಮಕ್ಕಳು ಒಂದೇ ಮಾತರಂ ಗೀತೆ ಗೆ ನೃತ್ಯ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News