ಉಡುಪಿ ಬಡಗಬೆಟ್ಟು ಸೊಸೈಟಿಯಲ್ಲಿ ಸ್ವಾತಂತ್ರ್ಯೋತ್ಸವ

Update: 2022-08-15 07:42 GMT
ಬಡಗಬೆಟ್ಟು ಸೊಸೈಟಿ

ಉಡುಪಿ, ಆ.15: ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಯಿತು.

ಸೊಸೈಟಿಯ ಅಧ್ಯಕ್ಷ ಸಂಜೀವ ಕಾಂಚನ್ ಧ್ವಜಾರೋಹಣ ನೆರವೇರಿಸಿದರು. ಸೊಸೈಟಿಯ ಉಪಾಧ್ಯಕ್ಷ ಎಲ್.ಉಮಾನಾಥ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಹಾಗೂ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಂಘದ ನಿರ್ದೇಶಕ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗ, ದೈನಿಕ ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು. ಸೊಸೈಟಿಯ ಪ್ರಧಾನ ವ್ಯವಸ್ಥಾಪಕ (ಪ್ರಭಾರ) ರಾಜೇಶ್ ಶೇರಿಗಾರ್ ವಂದಿಸಿದರು.

ಉಡುಪಿ ವಿದ್ಯೋದಯ ಸಮೂಹ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸ

ಉಡುಪಿ : ವಿದ್ಯೋದಯ ಟ್ರಸ್ಟ್‌ನ ಅಂಗ ಸಂಸ್ಥೆಗಳಾದ ವಿದ್ಯೋದಯ ಪಬ್ಲಿಕ್ ಸ್ಕೂಲ್, ಅನಂತೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ, ವಿದ್ಯೋದಯ ವಿದ್ಯಾಲಯ, ಶ್ರೀಕೃಷ್ಣ ಶಿಶುಮಂದಿರಗಳಲ್ಲಿ ಸ್ವಾತಂತ್ರ್ಯೋತ್ಸವ ದಿನವನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ನಿವೃತ್ತ ನಿರ್ದೇಶಕ ಪ್ರೊ.ಹೇರಂಜೆ ಕೃಷ್ಣ ಭಟ್, ಕಾಲೇಜಿನ ನಿವೃತ್ತ ಪ್ರಾಂಶುಪಾಲ  ಎ.ಎಲ್.ಛಾತ್ರ ನೆರವೇರಿಸಿದರು.

ಟ್ರಸ್ಟ್‌ನ ಕಾರ್ಯಾಧ್ಯಕ್ಷ ಎನ್.ನಾಗರಾಜ್ ಬಲ್ಲಾಳ್, ಕಾರ್ಯದರ್ಶಿ ಕೆ. ಗಣೇಶ್‌ರಾವ್, ಕೋಶಾಧಿಕಾರಿ ಪದ್ಮರಾಜ್ ಆಚಾರ್ಯ, ಟ್ರಸ್ಟ್‌ನ ಜೊತೆ ಕಾರ್ಯದರ್ಶಿ ರೂಪಾ ಬಲ್ಲಾಳ್, ಸದಸ್ಯರುಗಳಾದ ಯು.ದಾಮೋದರ್, ರಘುರಾಮ ಆಚಾರ್ಯ, ಎಲ್ಲಾ ಶಾಲಾ ಕಾಲೇಜುಗಳ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯಿನಿಯರು, ಸಿಬ್ಬಂದಿವರ್ಗ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News