ಕೃಷ್ಣಾಪುರ; ಹಿರಾ ಪಬ್ಲಿಕ್‌ ಸ್ಕೂಲ್‌ ನಲ್ಲಿ ಸ್ವಾತಂತ್ರ್ಯೋತ್ಸವ

Update: 2022-08-15 07:57 GMT

ಕೃಷ್ಣಾಪುರ; ಹಿರಾ ಪಬ್ಲಿಕ್‌ ಸ್ಕೂಲ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಧ್ವಜಾರೋಹಣವನ್ನು ದ.ಕ ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಮೂಸಬ್ಬ.ಪಿ.ಬ್ಯಾರಿ ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವವನ್ನು ತಿಳಿಸುವುದರೊಂದಿಗೆ ಹಲವಾರು ಮಹತ್ವಕಾಂಕ್ಷೆಯ ಸಲಹೆ ಸೂಚನೆಗಳನ್ನು ನೀಡಿದರು.

ಪ್ರಾರ್ಥನೆ ಗೀತೆಯ ಮೂಲಕ ಕಾರ್ಯಕ್ರವವು ಆರಂಭಗೊಂಡಿತು. ಶಾಲೆಯ ಮುಖ್ಯೋಪಾಧ್ಯಾಯಿನಿ ಭವ್ಯ ಅವರು ಸ್ವಾಗತಿಸಿದರು.

ಮುಖ್ಯ ಅತಿಥಿಯಾಗಿ  ಬಿ.ಐ.ಶಂಶುದ್ದೀನ್‌, ಉಪಾಧ್ಯಕ್ಷರು, ಕಾರುಣ್ಯ ಚಾರಿಟೇಬಲ್ ಟ್ರಸ್ಟ್, ಕೆ.ಶರೀಫ್ ಮುಂಚೂರು, ಸಂಚಾಲಕರು, ಜಮಾಅತೆ ಇಸ್ಲಾಮೀ-ಹಿಂದ್, ಕೃಷ್ಣಾಪುರ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಮೈನಬ ಝಕಿಯಾ, ಶಾಲಾ ಆಡಳಿತ ಮಂಡಳಿಯ ಸಂಚಾಲಕರಾದ ಅಲ್ತಾಫ್ ಹುಸೈನ್, ಕೃಷ್ಣಾಪುರ ಅವರು ಉಪಸ್ಥಿತರಿದ್ದರು.

ಸಹ ಶಿಕ್ಷಕಿಯಾದ ತಬಸ್ಸುಮ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆ ಹಾಗೂ ನೃತ್ಯದ ಮೂಲಕ ದೇಶಾಭಿಮಾನವನ್ನು ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News