ತ್ರಿವರ್ಣ ಧ್ವಜದಡಿಯಲ್ಲಿ ನಾವೆಲ್ಲರೂ ಒಂದೇ: ಸಿಎಂ ಬಸವರಾಜ ಬೊಮ್ಮಾಯಿ‌

Update: 2022-08-15 09:19 GMT
(ಸಂಗೊಳ್ಳಿ ರಾಯಣ್ಣ ಅವರ 225 ನೇ ಜಯಂತೋತ್ಸವದಲ್ಲಿ ಸಿಎಂ ಬೊಮ್ಮಾಯಿ)

ಬೆಂಗಳೂರು: 'ಬಾವುಟದ ಬಗ್ಗೆ ಜಗಳ ಏನಿಲ್ಲ. ತ್ರಿವರ್ಣ ಧ್ವಜದಡಿಯಲ್ಲಿ ನಾವೆಲ್ಲರೂ ಒಂದೇ. ಉಳಿದ ವೇಳೆ ಬೇರೆ. ಭಾರತದ ತ್ರಿವರ್ಣ ಧ್ವಜದಡಿಯಲ್ಲಿ ನಾವೆಲ್ಲರೂ ಭಾರತ ಮಾತೆಯ ಮಕ್ಕಳು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಇಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 225 ನೇ ಜಯಂತೋತ್ಸವದಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

'ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹರ ಘರ ತಿರಂಗಾ ಅತ್ಯಂತ ಯಶಸ್ವಿಯಾಗಿದೆ' ಎಂದು ಹೇಳಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಕರೆಯ ಹರ್ ಘರ್ ತಿರಂಗಾ ಅತ್ಯಂತ ಯಶಸ್ವಿಯಾಗಿ, ಅದ್ಭುತವಾಗಿಯಾಗಿದೆ. ಮುಂದಿನ 25 ವರ್ಷಕ್ಕೆ ಭದ್ರ ಬುನಾದಿಯಾಗಿದೆ‌. ಎಲ್ಲರೂ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ತಿಳಿಸಿದರು.

75 ವರ್ಷದ ಸ್ವತಂತ್ರ್ಯೋತ್ಸವವನ್ನು ಇಡೀ ದೇಶವೇ ಆಚರಣೆ ಮಾಡುತ್ತಿದೆ. ದೇಶದಲ್ಲಿ 40 ಕೋಟಿ ಮನೆಗಳ ಮೇಲೆ ಧ್ವಜ ಹಾರಾಡುತ್ತಿದೆ. ಕರ್ನಾಟಕದಲ್ಲಿ 1.25 ಕೋಟಿ ಮನೆಗಳ ಮೇಲೆ ಧ್ವಜ ಹಾರಾಡುತ್ತಿದೆ. ಎಲ್ಲರೂ ಸೇರಿ ಸಂಭ್ರಮಿಸಬೇಕು. ಇದರಲ್ಲಿ ಜಾತಿ, ಮತ, ಪಕ್ಷ, ಪಂಗಡ ಇಲ್ಲ. ನಾವೆಲ್ಲರೂ ಭಾರತೀಯರು. ಒಗ್ಗಟ್ಟಾಗಿ ಒಂದಾಗಿ ಮಾಡಬೇಕು. ಎಷ್ಟು ಜನ ಇದರಲ್ಲಿ ಪಾಲ್ಗೊಳ್ಳುತ್ತಾರೆ ಅಷ್ಟು ಒಳ್ಳೆಯದ್ದು. ನಾನು ಎಲ್ಲವನ್ನೂ ಸ್ವಾಗತ ಮಾಡುತ್ತೇನೆ.ದೇಶ ಒಂದಾಗಿ ಎದ್ದು ನಿಲ್ಲಬೇಕೆಂದು ಎಲ್ಲರೂ ಸಹಕಾರ ಕೊಡುತ್ತಿದ್ದಾರೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News