ಕಂಚಿನಡ್ಕ ಮಸೀದಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2022-08-15 11:09 GMT

ಪಡುಬಿದ್ರಿ: ಇಲ್ಲಿನ ಕಂಚಿನಡ್ಕ ಮೊಹಿಯುದ್ದೀನ್ ಜುಮಾ ಮಸೀದಿ ಹಾಗೂ ನೂರುಲ್ ಹುದಾ ಮದ್ರಸದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಪಡುಬಿದ್ರಿ ಜಮಾಅತ್ ಸಮಿತಿಯ ಅಧ್ಯಕ್ಷ ಹಾಜಿ ಪಿ.ಕೆ. ಮೊಹಿದ್ದೀನ್ ಉಚ್ಚಿಲ್ ಧ್ವಜಾರೋಹಣ ನೆರವೇರಿಸಿದರು. ಪಡುಬಿದ್ರಿ ಜುಮಾ ಮಸೀದಿ ಖತೀಬ್ ಹಾಜಿ ಎಸ್.ಎಂ. ಅಬ್ದುಲ್ ರಹ್ಮಾನ್ ಮದನಿ ದುವಾಗೈದರು.

ಹಾಜಿ ಎಸ್.ಪಿ. ಉಮರ್ ಫಾರೂಕ್ ಶುಭಶಂಸನೆಗೈದರು. ಕಂಚಿನಡ್ಕ ಮಸೀದಿ ಖತೀಬ್ ಅಬ್ದುಲ್ ಲತೀಫ್ ಮದನಿ,   ಇಆನತುಲ್ ಮಸಾಕೀನ್ ಅಧ್ಯಕ್ಷ ಎಚ್.ಎಸ್. ಅಬ್ದುಲ್ ರಹ್ಮಾನ್, ಮುಸ್ಲಿಮ್ ವೆಲ್‍ಫೇರ್ ಅಧ್ಯಕ್ಷ ಇಸ್ಮಾಯಿಲ್ ಕಂಚಿನಡ್ಕ, ಎಸ್ಸೆಸ್ಸೆಫ್‌ ಪಡುಬಿದ್ರೆ ಅಧ್ಯಕ್ಷ ಸಫ್ವಾನ್ ಕೆ, ಖಿದ್ಮತುಲ್ ಅನಾಮ್ ಅಧ್ಯಕ್ಷ ಮಯ್ಯದ್ದಿ ಮಜಲಕೋಡಿ ಉಪಸ್ಥಿತರಿದ್ದರು.

ಜಮಾಅತ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಶೇಖ್ ಇಸ್ಮಾಯಿಲ್ ಮಾಸ್ಟರ್ ಸ್ವಾಗತಿಸಿದರು. ಸದರ್ ಮುಅಲ್ಲಿಂ ಅಶ್ರಫ್ ಸಅದಿ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News