ಉಡುಪಿ: ಸಿಐಟಿಯುನಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ

Update: 2022-08-15 11:14 GMT

ಉಡುಪಿ : ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಉಡುಪಿ ಸಿಐಟಿಯು ವತಿಯಿಂದ ಉಡುಪಿಯ ಬಸ್ ನಿಲ್ದಾಣದ ಬಳಿ ಮಧ್ಯರಾತ್ರಿವರೆಗೆ ಜಾಗರಣೆ ನಡೆಸಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.

ಕಾರ್ಯಕ್ರಮವನ್ನು ಸಿಐಟಿಯು ಮುಖಂಡ ಕೆ.ಶಂಕರ್ ಉದ್ಘಾಟಿಸಿ ಮಾತನಾಡಿ, ಕಾರ್ಮಿಕರಿಗೆ ಕನಿಷ್ಠ ಕೂಲಿ, ಉದ್ಯೋಗ, ಆರೋಗ್ಯ, ಶಿಕ್ಷಣ, ಸಾಮಾಜಿಕ ನ್ಯಾಯ ಕೊಡದೇ ಇರುವುದು ಸ್ವಾತಂತ್ರ್ಯಕ್ಕೆ ಯಾವ ಅರ್ಥವೂ ಇಲ್ಲ. ಅದಕ್ಕಾಗಿ ಕಾರ್ಮಿಕ ವರ್ಗ ನಿರಂತರ ಹೋರಾಟ ಮಾಡುತ್ತದೆ. ಸ್ವಾತಂತ್ರ್ಯ ಹೋರಾಟಗಾರರ ಕನಸು ಈಡೇರಿಸಲು ಸಿಐಟಿಯು ಬದ್ದವಾಗಿದೆ ಎಂದು ಹೇಳಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪ್ರಾಸ್ತಾವಿಕ ವಾಗಿ ಮಾತನಾಡಿದರು. ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಎಚ್.ನರಸಿಂಹ, ಶಶಿಧರ ಗೊಲ್ಲ, ಶೇಖರ ಬಂಗೇರ, ಮಹಾಬಲ ವಡೇರಹೋಬಳಿ, ಬಲ್ಕೀಸ್, ದಯಾನಂದ ಕೋಟ್ಯಾನ್, ರಾಮ ಕಾರ್ಕಡ, ಕವಿರಾಜ್ ಮುಂತಾದವರು ಮಾತನಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News