ಶಿವಮೊಗ್ಗ: ಯುವಕನಿಗೆ ಚೂರಿ ಇರಿತ

Update: 2022-08-15 11:34 GMT
ಸಾಂದರ್ಭಿಕ ಚಿತ್ರ

​ಶಿವಮೊಗ್ಗ: ಯುವಕನೋರ್ವನಿಗೆ ಚಾಕು ಇರಿದ ಘಟನೆ ನಗರದ ಗಾಂಧಿ ಬಝಾರ್ ನಲ್ಲಿ ನಡೆದಿದೆ.

ಗಾಂಧಿ ಬಜಾರ್ ನಲ್ಲಿದ್ದ‌ ಪ್ರೇಮ್ ಸಿಂಗ್ ( 20) ಎಂಬ ಯುವಕನಿಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಚೂರಿಯಿಂದ ಇರಿದಿದ್ದಾರೆ ಎಂದು ತಿಳಿದು ಬಂದಿದೆ.

ಚೂರಿ ಇರಿತಕ್ಕೊಳಗಾದ ಯುವಕನನ್ನ ಮೆಗ್ಗಾನ್  ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. 


ಸಾವರ್ಕರ್ ಫೋಟೋ ಇರುವ ಬ್ಯಾನರ್ ತೆರವುಗೊಳಿಸಿರುವ ವಿಚಾರಕ್ಕೆ ನಡೆದ ಗಲಾಟೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು , ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ನಿಷೇದಾಜ್ಞೆ ಜಾರಿ ಮಾಡಿ ತಹಶೀಲ್ದಾರ್ ನಾಗರಾಜ್ ಆದೇಶ ಹೊರಡಿಸಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News