ಉಡುಪಿ: ಕಾಂಗ್ರೆಸಿನಿಂದ ಸ್ವಾತಂತ್ರ್ಯ ಅಮೃತಮಹೋತ್ಸವ ಆಚರಣೆ
ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಸೇವಾದಳದ ವತಿಯಿಂದ ೭೬ನೇ ಸ್ವಾತಂತ್ರ್ಯೋತ್ಸವ ದಿನವನ್ನು ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಬಳಿ ಇರುವ ಕ್ಲಾಕ್ ಟವರ್ನ ಗಾಂಧಿ ಪ್ರತಿಮೆ ಬಳಿ ಆಚರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ನ ಹಿರಿಯ ಉಪಾಧ್ಯಕ್ಷರಾದ ವಾಸುದೇವ ಯಡಿಯಾಳ ಇವರು ೭೫ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿನಯ ಕುಮಾರ ಸೊರಕೆ, ಮುಖಂಡರಾದ ಬಿ.ನರಸಿಂಹಮೂರ್ತ್ವಿ, ಭಾಸ್ಕರ ರಾವ್ ಕಿದಿಯೂರು, ಹರೀಶ್ ಕಿಣಿ, ಶಬ್ಬೀರ್ ಅಹ್ಮದ್, ಮಹಾಬಲ ಕುಂದರ್, ಸದಾಶಿವ ಕಟ್ಟಗುಡ್ಡೆ, ಲೂಯಿಸ್ ಲೋಬೊ, ಉಪೇಂದ್ರ, ಲಕ್ಷಣ ಪೂಜಾರಿ, ಸೇವಾದಳದ ಶರತ್, ರಂಜಿತ್, ಪ್ರವೀಣ್, ಲಕ್ಷ್ಮೀ ಭಾಗವಹಿಸಿದ್ದರು.
ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಹಮ್ಮಿಕೊಂಡ ಸ್ವಾತಂತ್ರ್ಯ ಅಮೃತಮಹೋತ್ಸವ ಆಚರಣೆಯನ್ನು ಕಾಂಗ್ರೆಸ್ ಪಕ್ಷದ ಹಿರಿಯ ಉಪಾಧ್ಯಕ್ಷ ಹಿರಿಯಣ್ಣ ಧ್ವಜಾರೋಹಣ ಗೈಯುವ ಮೂಲಕ ನೆರವೇರಿಸಿದರು.