ದಾವಣಗೆರೆ | ರೈಲಿಗೆ ಸಿಲುಕಿ ವ್ಯಕ್ತಿ ಸಾವು; ಗುರುತು ಪತ್ತೆಗೆ ಪೊಲೀಸರ ಮನವಿ

Update: 2022-08-15 14:55 GMT
ಸಾಂದರ್ಭಿಕ ಚಿತ್ರ

ದಾವಣಗೆರೆ: ಇಲ್ಲಿನ ಚಿಕ್ಕಜಾಜೂರು ಮತ್ತು ಸಾಸಲು ರೈಲು ನಿಲ್ದಾಣಗಳ ಮಧ್ಯೆ ರೈಲಿಗೆ ಸಿಲುಕಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ 50 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಗುರುತು ಪತ್ತೆಯಾಗಿಲ್ಲ.

ಸುಮಾರು 5.4 ಅಡಿ ಎತ್ತರ ಇರುವ ವ್ಯಕ್ತಿ, ತುಂಬು ತೋಳಿನ ಶರ್ಟ್, ನೀಲಿ ಚೌದ ಪಂಚೆ ಹಾಗೂ ಬೂದು ಬಣ್ಣದ ಸ್ವೆಟರ್ ಧರಿಸಿದ್ದಾನೆ. ಸಾಧಾರಣ ಮೈಕಟ್ಟು, ಕಪ್ಪು ಮೈ ಬಣ್ಣ, ಕೋಲು ಮುಖ, ತಲೆಯಲ್ಲಿ ಕಪ್ಪು-ಬಿಳಿ ಮಿಶ್ರಿತ ಕೂದಲು ಹೊಂದಿದ್ದಾನೆ. ಈ ಕುರಿತು ದಾವಣಗೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂಬಂಧಿಕರು ಇದ್ದಲ್ಲಿ ದಾವಣಗೆರೆ ರೈಲ್ವೆ ಪೊಲೀಸ್ ಠಾಣೆ ದೂ: 08192-259643,

ಮೊ: 94808 00469 ಅಥವಾ 94808 02123 ಸಂಪರ್ಕಿಸಲು ಕೋರಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News