ಇಮಾಮ್ಸ್ ಕೌನ್ಸಿಲ್ ದ.ಕ.ಜಿಲ್ಲಾ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Update: 2022-08-15 17:02 GMT

ಪುಂಜಲಕಟ್ಟೆ: ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ಪುಂಜಲಕಟ್ಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಉಸ್ಮಾನ್ ಸಅದಿ ನೆರವೇರಿಸಿದರು.

ಅಧ್ಯಕ್ಷತೆ ವಹಿಸಿದ್ದ ಇಮಾಮ್ಸ್ ಕೌನ್ಸಿಲ್ ಕರಾವಳಿ ಪ್ರಾಂತ ಅಧ್ಯಕ್ಷ ಜಾಫರ್ ಸಾದಿಕ್ ಫೈಝಿ ಸಂದೇಶ ನೀಡಿದರು. ಅಬ್ದುಲ್ಲಾ ಮುಸ್ಲಿಯಾರ್ ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಪನಕಜೆ ಜುಮ್ಮಾ ಮಸೀದಿಯ ಅಧ್ಯಕ್ಷ ಡಾ.ನಿಯಾಝ್, ಪಾಂಡವರಕಲ್ಲು ಮಸೀದಿಯ ಅಧ್ಯಕ್ಷ ಅಥಾವುಲ್ಲಾ, ಮಾಲಾಡಿಪಲಿಕ್ಕೆ  ಮಸೀದಿಯ ಅಧ್ಯಕ್ಷ ಇಸ್ಮಾಯಿಲ್, ಪಿಎಫ್‌ಐ ಮಡಂತ್ಯಾರು ವಲಯ ಅಧ್ಯಕ್ಷ  ಬಿ.ಎಂ. ಅಬ್ದುಲ್ ರಝಾಕ್, ಮಡಂತ್ಯಾರು ಗ್ರಾಪಂ ಸದಸ್ಯರಾದ ಮುಹಮ್ಮದ್ ಹನೀಫ್ ಮತ್ತು ಅಬ್ದುಲ್ ಖಾಲಿಕ್ ಮುಸ್ಲಿಯಾರ್ ಭಾಗವಹಿಸಿದ್ದರು. ಇಮಾಮ್ಸ್ ಕೌನ್ಸಿಲ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾರಿಸ್ ಹನೀಫಿ  ಸ್ವಾಗತಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News