ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಸ್ವಾತಂತ್ರ್ಯೋತ್ಸವ

Update: 2022-08-15 17:18 GMT

ಮಂಗಳೂರು, ಆ.15: ಸಮಾನತೆ, ಸಾಮರಸ್ಯ, ಸಾಮಾಜಿಕ ನ್ಯಾಯಗಳನ್ನು ಒಳಗೊಂಡ ಪ್ರಜಾಪ್ರಭುತ್ವವೇ ಅಪಾಯದಲ್ಲಿರುವ ಈ ಸಂದರ್ಭದಲ್ಲಿ ಸಾಂವಿಧಾನಿಕ ಹಾಗೂ ಪ್ರಜಾಸತ್ತಾತ್ಮಕ ಆಶಯಗಳನ್ನು ರಕ್ಷಿಸಲು ನಾವೆಲ್ಲರೂ ಮುಂದಾಗಬೇಕು ಎಂದು ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್ ಕರೆ ನೀಡಿದರು.

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ದ.ಕ. ಜಿಲ್ಲಾ ಕಾಂಗ್ರೆಸ್‌ನಿಂದ ಸೋಮವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡುತ್ತಿದ್ದರು.

ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ, ಮಾಜಿ ಶಾಸಕ ಜೆ.ಆರ್.ಲೋಬೊ, ಮುಂಚೂಣಿ ಘಟಕಾಧ್ಯಕ್ಷ ಡಾ.ಶೇಖರ್ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳಾದ ಶುಭೋದಯ ಆಳ್ವ, ನೀರಜ್‌ ಚಂದ್ರ ಪಾಲ್, ಶಬ್ಬೀರ್ ಎಸ್, ಚೇತನ್ ಬೆಂಗರೆ, ಜಯಶೀಲ ಅಡ್ಯಂತಾಯ, ಟಿ.ಕೆ.ಸುಧೀರ್, ಭಾಸ್ಕರ್ ರಾವ್, ಮಾಜಿ ಕಾರ್ಪೊರೇಟರ್ ಸಬಿತಾ ಮಿಸ್ಕಿತ್, ಟಿ.ಕೆ. ಶೈಲಜಾ, ಗೀತಾ ಅತ್ತಾವರ, ರಮಾನಂದ ಪೂಜಾರಿ, ಸುನೀಲ್ ಕುಮಾರ್ ಪೂಜಾರಿ, ಎಸ್.ಕೆ ಶೌಹಾನ್, ಪ್ರಕಾಶ್ ಆಲ್ವಿನ್, ದೀಕ್ಷಿತ್ ಅತ್ತಾವರ ಹಾಗೂ ಸೇವಾದಳದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಕಾಂಗ್ರೆಸ್ ಸೇವಾದಳದ ಅಧ್ಯಕ್ಷ  ಜೋಕ್ಕಿಂ ಡಿಸೋಜ ಧ್ವಜ ರಕ್ಷಕರಾಗಿ ಕಾರ್ಯನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News