ಕುದ್ರೋಳಿ ಆಟೋ ಪಾರ್ಕ್ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಮಂಗಳೂರು : ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆ ಕುದ್ರೋಳಿ ಆಟೋ ಪಾರ್ಕ್ನಲ್ಲಿ ಸೋಮವಾರ ನಡೆಯಿತು. ಇದೇ ವೇಳೆ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ವತಿಯಿಂದ ಅರ್ಹ ಫಲಾನುಭವಿಗಳಿಗೆ ವೀಲ್ಚೇರ್ನ್ನು ವಿತರಿಸಲಾಯಿತು.
ಇದೇ ವೇಳೆ ಕುದ್ರೋಳಿ ಆಟೋ ಪಾರ್ಕ್ಗೆ ಕುಡಿಯುವ ನೀರಿನ ಟ್ಯಾಂಕ್ ಕೊಡುಗೆಯಾಗಿ ನೀಡಿದ ವಾಯ್ಸ್ ಆಫ್ ಬ್ಲಡ್ ಡೋನರ್ಸ್ನ ಸ್ಥಾಪಕಾಧ್ಯಕ್ಷ ರವೂಫ್ ಬಂದರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಿವೃತ್ತ ಶಿಕ್ಷಕರಾದ ಹನೀಫ್ ಹಾಜಿ ಅವರನ್ನೂ ಇದೇ ವೇಳೆ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಕಾರ್ಪೋರೇಟರ್ ಅಬ್ದುಲ್ ಅಝೀಝ್ ಕುದ್ರೋಳಿ, ಕುದ್ರೋಳಿ ಆಟೋ ಪಾರ್ಕ್ನ ಪದಾಧಿಕಾರಿಗಳು ಹಾಗೂ ಚಾಲಕರು ಸ್ವಚ್ಚತೆಗೆ ಆದ್ಯತೆಯನ್ನು ನೀಡಿದ್ದಾರೆ. ವಾಯ್ಸ್ ಆಫ್ ಬ್ಲಡ್ ಡೋನರ್ಸ್ನ ಸ್ಥಾಪಕಾಧ್ಯಕ್ಷ ರವೂಫ್ ಬಂದರ್ ರನ್ನು ಗೌರವಿಸಿರುವುದು ಉತ್ತಮ ಕಾರ್ಯ ಎಂದು ಶ್ಲಾಘಿಸಿದರು.
ಆರ್ಸಿಎಂನ ಅಧ್ಯಕ್ಷ ಝುಬೈರ್, ಕಾರ್ಪೋರೇಟರ್ ಶಂಸುದ್ದೀನ್, ಎಸ್ಡಿಪಿಐ ಮುಖಂಡ ಮುಝೈರ್, ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಮಹಿಳಾ ಘಟಕದ ಕಾರ್ಯದರ್ಶಿ ಆಲಿಷಾ ಅಮೀನ್ ಮತ್ತಿತರರು ಉಪಸ್ಥಿತರಿದ್ದರು. ಕಬೀರ್ ಕುದ್ರೋಳಿ ಕಾರ್ಯಕ್ರಮ ನಿರೂಪಿಸಿದರು.