ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
Update: 2022-08-15 17:52 GMT
ಮಂಜೇಶ್ವರ: ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವನ್ನು ಬಹಳ ವಿಜ್ರಂಭಣೆಯಿಂದ ಆಚರಿಸಲಾಯಿತು.
ಧ್ವಜಾರೋಹಣಕ್ಕೆ ಮುಂಚಿತವಾಗಿ ಶಾಲಾ ಆವರಣದಿಂದ ತೂಮಿನಾಡು ಜಂಕ್ರನ್ ತನಕ ವಿದ್ಯಾರ್ಥಿಗಳಿಂದ ಪರೇಡ್ ಹಮ್ಮಿಕೊಳ್ಳಲಾಯಿತು.
ಬಳಿಕ ಶಾಲಾ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಶಾಲಾ ಚೇಯರ್ ಮ್ಯಾನ್ ಅಬ್ದುಲ್ ರಹ್ಮಾನ್ ಅರಿಮಲ ರವರು ಧ್ವಜಾರೋಹಣಗೈದು ವಿದ್ಯಾರ್ಥಿಗಳಿಂದ ವಂದನೆ ಸ್ವೀಕರಿಸಿದರು.
ಬಳಿಕ ಅಬ್ದುಲ್ ರಹ್ಮಾನ್ ಅರಿಮಲ ರವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಮುಸ್ಲಿಂ ಲೀಗ್ ಹಿರಿಯ ನೇತಾರ ಹಾಗೂ ಸಾಮಾಜಿಕ ಕಾರ್ಯಕರ್ತರೂ ಆಗಿರುವ ಮೊಹಿದಿನ್ ಕುಂಞಿ ಕುಂಜತ್ತೂರು ಸ್ವಾತಂತ್ರ್ಯ ದಿನದ ಬಗ್ಗೆ ಸಂದೇಶ ನೀಡಿದರು.
ಶಾಲಾ ಅಧ್ಯಾಪಕರುಗಳಾದ ಪರ್ವೀನ್, ಜುನೈದಾ ಹಾಗೂ ಸಲ್ಮಾನ್ ಮೊದಲಾದವರು ಕಾರ್ಯಕ್ರಮಕ್ಕೆ ನೇತೃತ್ವ ನೀಡಿದರು. ಬಳಿಕ ವೇದಿಕೆಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.