ಮಲ್ಲೇಶ್ವರಂನಲ್ಲಿ 'ಆಝಾದಿ ಕಾ ಅಮೃತ ಮಹೋತ್ಸವ'; ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ನಡುರಾತ್ರಿ ಧ್ವಜಾರೋಹಣ
Update: 2022-08-15 17:55 GMT
ಬೆಂಗಳೂರು: ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಪ್ರತಿಷ್ಠಾನದ ವತಿಯಿಂದ ಮಲ್ಲೇಶ್ವರಂನ 18ನೇ ಅಡ್ಡ ರಸ್ತೆಯ ಸರಕಾರಿ ಕಾಲೇಜು ಮೈದಾನದಲ್ಲಿ ರವಿವಾರ ರಾತ್ರಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯದ ಅಮೃತ ಮಹೋತ್ಸವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಂಡರು.
ರವಿವಾರ ರಾತ್ರಿ ಒಂಬತ್ತು ಗಂಟೆಗೆ ಗಂಧರ್ವಲೋಕ ಅನಾವರಣಗೊಂಡಿತು. ಬಳಿಕ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಜನರು ಭಾಗವಿಸಿದ್ದು, ಮುಖ್ಯಮಂತ್ರಿ ಬೊಮ್ಮಾಯಿ ಸಚಿವ ಅಶ್ವತ್ಥನಾರಾಯಣರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.