ಶ್ರೀನಗರ: ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿ ಸಾವು

Update: 2022-08-15 18:10 GMT

ಶ್ರೀನಗರ, ಆ. 15: ಜಮ್ಮು ಹಾಗೂ ಕಾಶ್ಮೀರದ ಶ್ರೀನಗರದಲ್ಲಿ ನಡೆದ ಗುಂಡಿನ ಕಾಳಗದಲ್ಲಿ ಗಾಯಗೊಂಡಿದ್ದ ಪೊಲೀಸ್ ಸಿಬ್ಬಂದಿಯೋರ್ವರು ಸೋಮವಾರ ಮೃತಪಟ್ಟಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ರವಿವಾರ ನಡೆದ ಎನ್‌ಕೌಂಟರ್‌ನ ಸಂದರ್ಭ ಕಾನ್ಸ್‌ಟೆಬಲ್ ಸರ್ಫ್ರಾಜ್ ಅಹ್ಮದ್ ಅವರು ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ  ಕರೆದೊಯ್ಯಲಾಗಿತ್ತು. ಈ ಘಟನೆಯಲ್ಲಿ ಓರ್ವ ಉಗ್ರ ಕೂಡ ಗಾಯಗೊಂಡಿದ್ದ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News