ಶಿವಮೊಗ್ಗ | ಚೂರಿ ಇರಿತ ಪ್ರಕರಣ: ಆರೋಪಿಗಳ ಬಂಧನ

Update: 2022-08-15 18:37 GMT

ಶಿವಮೊಗ್ಗ: ನಗರದ ಎಎ ಸರ್ಕಲ್ ಬಳಿ ಸಾವರ್ಕರ್ ಫ್ಲೆಕ್ಸ್ ತೆರವು ಗಲಾಟೆ ಪ್ರಕರಣದ ಬೆನ್ನಲ್ಲೇ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಜೆಸಿ‌ ನಗರ ವಾಸಿ ನದೀಮ್(25) ಮತ್ತು ಬುದ್ಧ ನಗರ ವಾಸಿ ಅಬ್ದುಲ್ ರೆಹಮಾನ್( 25) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.

ಆಶೋಕ್ ರಸ್ತೆ ನಿವಾಸಿ ಪ್ರೇಮ್ ಸಿಂಗ್ (20) ಎಂಬ ಯುವಕ ಸೋಮವಾರ ಸಂಜೆ ಅಂಗಡಿ ಕೆಲಸ ಮುಗಿಸಿಕೊಂಡು ಮನೆಯ ಕಡೆ ಹೋಗುತ್ತಿದ್ದಾಗ ದುಷ್ಕರ್ಮಿಗಳು ಚಾಕುವಿನಿಂದ ಇರಿದು‌ ಕೊಲೆಗೆ ಯತ್ನಿಸಿದ್ದರು.ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಐಪಿಸಿ ಸೆಕ್ಷನ್ 307 ಪ್ರಕರಣ ದಾಖಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೆಲವೇ ಗಂಟೆಯಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ.

ಇದನ್ನೂ ಓದಿ:  ಸೆಕ್ಷನ್ 144 ಹಿನ್ನೆಲೆ; ಶಿವಮೊಗ್ಗ ನಗರ, ಭದ್ರಾವತಿ ಪಟ್ಟಣ ವ್ಯಾಪ್ತಿಯ ಶಾಲಾ- ಕಾಲೇಜುಗಳಿಗೆ ನಾಳೆ (ಆ.16) ರಜೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News