ಆಲದಪದವು ನೂರುಲ್ ಇಸ್ಲಾಮ್ ಮದ್ರಸದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Update: 2022-08-16 03:16 GMT

ಬಂಟ್ವಾಳ : ತಾಲೂಕಿನ ಆಲದಪದವು ನೂರುಲ್ ಇಸ್ಲಾಮ್ ಮದರಸದ ವತಿಯಿಂದ ದೇಶದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಿಸಲಾಯಿತು. 

ಮದ್ರಸ ಸಮಿತಿ ಅಧ್ಯಕ್ಷ ಹಂಝ ಬಸ್ತಿಕೋಡಿ ರಾಷ್ಟ್ರ ಧ್ವಜರೋಹಣಗೈದು ಗೌರವ ವಂದನೆ ಸ್ವೀಕರಿಸಿದರು. 

ಮಸೀದಿ ಇಮಾಮ್ ಅಬ್ದುಲ್ ರಹಿಮಾನ್ ಉಮೈದಿ ಪ್ರಸ್ತಾವಿಕ ಮಾತುಗಳನ್ನಾಡಿದರು. 

ಮದರಸ ಆಡಳಿತ ಸಮಿತಿಯ ಕಾರ್ಯದರ್ಶಿ ಅಬ್ಬು ನಡಾಯಿ, ಕೋಶಾಧಿಕಾರಿ ಇಮ್ರಾನ್ ಬಸ್ತಿಕೋಡಿ, ಇತರ ಸದಸ್ಯರುಗಳು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News