ಬಿಹಾರದಲ್ಲಿ ಇಂದು ನಿತೀಶ್ ಕುಮಾರ್ ಸಂಪುಟ ವಿಸ್ತರಣೆ: ಆರ್ ಜೆಡಿಗೆ ಹೆಚ್ಚಿನ ಸ್ಥಾನ ಸಿಗುವ ಸಾಧ್ಯತೆ

Update: 2022-08-16 04:31 GMT

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Bihar Chief Minister Nitish Kumar)ಅವರು ಇಂದು ತಮ್ಮ ದ್ವಿಸದಸ್ಯ ಸಚಿವ ಸಂಪುಟವನ್ನು ವಿಸ್ತರಿಸಲಿದ್ದು, ಮೈತ್ರಿಕೂಟದ ಪಾಲುದಾರ ರಾಷ್ಟ್ರೀಯ ಜನತಾ ದಳಕ್ಕೆ  (RJD) ಹೆಚ್ಚಿನ ಸ್ಥಾನಗಳು ದೊರೆಯಲಿವೆ ಎಂದು ಮೂಲಗಳು ತಿಳಿಸಿವೆ.

ಕಾಂಗ್ರೆಸ್ ಸೇರಿದಂತೆ ಮಹಾಘಟಬಂಧನ್ ಅಥವಾ ಮಹಾಮೈತ್ರಿಕೂಟದ ಭಾಗವಾಗಿರುವ ವಿವಿಧ ಪಕ್ಷಗಳಿಂದ ಒಟ್ಟು 31 ಸಚಿವರು ಇಂದು ಸಂಪುಟಕ್ಕೆ (Cabinet)  ಸೇರ್ಪಡೆಯಾಗಲಿದ್ದಾರೆ. ರಾಜಭವನದಲ್ಲಿ ಬೆಳಗ್ಗೆ 11.30ರ ಸುಮಾರಿಗೆ ಪ್ರತಿಜ್ಞಾ ವಿಧಿ ಸ್ವೀಕಾರ ಸಮಾರಂಭ ನಡೆಯಲಿದೆ.

ವಿಜಯ್ ಕುಮಾರ್ ಚೌಧರಿ, ಅಶೋಕ್ ಚೌಧರಿ, ಸಂಜಯ್ ಝಾ, ಮದನ್ ಸಾಹ್ನಿ, ಜಯಂತ್ ರಾಜ್, ಶೀಲಾ ಮಂಡಲ್, ಬಿಜೇಂದ್ರ ಯಾದವ್, ಶ್ರವಣ್ ಕುಮಾರ್, ಸುನಿಲ್ ಕುಮಾರ್ ಹಾಗೂ  ಜಮಾ ಖಾನ್ ಸೇರಿದಂತೆ ಜನತಾ ದಳ ಯುನೈಟೆಡ್‌ನ ಎಲ್ಲಾ ಸಚಿವರನ್ನು ನಿತೀಶ್ ಕುಮಾರ್ ಉಳಿಸಿಕೊಳ್ಳುವ ಸಾಧ್ಯತೆಯಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News