ಕುದ್ರೋಳಿ | ಮುಸ್ಲಿಮ್ ಐಕ್ಯತಾ ವೇದಿಕೆಯಿಂದ ಸ್ವಾತಂತ್ರ್ಯೋತ್ಸವ

Update: 2022-08-16 05:18 GMT

ಮಂಗಳೂರು, ಆ.16: ಕುದ್ರೋಳಿಯ ಮುಸ್ಲಿಮ್ ಐಕ್ಯತಾ ವೇದಿಕೆಯ ವತಿಯಿಂದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಧ್ವಜಾರೋಹಣವನ್ನು ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಶಂಸುದ್ದೀನ್ ಎಚ್.ಬಿ.ಟಿ. ನೆರವೇರಿಸಿದರು.

ವೇದಿಕೆಯ ಪ್ರಧಾನ ಕಾರ್ಯದರ್ಶಿ ಬಿ.ಅಬೂಬಕರ್ ಮಾತನಾಡಿ ಶುಭ ಹಾರೈಸಿದರು.

ಬಳಿಕ ಕುದ್ರೋಳಿಯ ಫಾತಿಮಾ ಇಸ್ಲಾಮಿಕ್ ಸೆಂಟರ್ ನಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಕಳೆದ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದ ಎಂಟು ವಿದ್ಯಾರ್ಥಿಗಳನ್ನು ಹಾಗೂ ದ್ವಿತೀಯ ಪಿಯುಸಿಯ ಐವರು ವಿಧ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

 ರಫೀಕ್ ಮಾಸ್ಟರ್, ಬಂದರ್ ಪೊಲೀಸ್ ಠಾಣೆಯ ಸರ್ಕಲ್ ಇನ್ ಸ್ಪೆಕ್ಟರ್ ರಾಘವೇಂದ್ರ ಬೈಂದೂರು ಶುಭ ಹಾರೈಸಿದರು.

ವೇದಿಕೆಯಲ್ಲಿ ಗಣೇಶ್ ಫ್ರೆಂಡ್ ಸರ್ಕಲ್ ಮಾಜಿ ಅಧ್ಯಕ್ಷ ನಾರಾಯಣ ಕರ್ಕೇರ, ಮುಹಿಯುದ್ದೀನ್ ಮಸೀದಿಯ ಅಧ್ಯಕ್ಷ ಅಝೀಝ್ ಪಿ.ಪಿ., ಮುಸ್ಲಿಮ್ ಐಕ್ಯತಾ ವೇದಿಕೆಯ ಅಧ್ಯಕ್ಷ ಮುಹಮ್ಮದ್ ಯಾಸೀನ್, ಪ್ರಧಾನ ಕಾರ್ಯದರ್ಶಿ ಬಿ.ಅಬೂಬಕರ್, ಖಜಾಂಚಿ ಮಕ್ಬೂಲ್ ಅಹ್ಮದ್, ಮನಪಾ ಸದಸ್ಯ ಶಂಸುದ್ದೀನ್ ಎಚ್.ಬಿ.ಟಿ., ಜಾಮಿಯ ಮಸೀದಿಯ ಖತೀಬ್ ಝುಬೈರ್ ಮೌಲಾನಾ  ಉಪಸ್ಥಿತರಿದ್ದರು.

ಮುಹಮ್ಮದ್ ಹಾರಿಸ್ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News