ಕಡಬ | ಯುವಕನಿಗೆ ಚೂರಿ ಇರಿತ ಪ್ರಕರಣ: ಆರೋಪಿಯ ಬಂಧನ

Update: 2022-08-16 09:47 GMT
ಸಾಂದರ್ಭಿಕ ಚಿತ್ರ

ಕಡಬ, ಆ.16: ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನಿಗೆ ಚೂರಿಯಿಂದ ಇರಿದು ಗಾಯಗೊಳಿಸಿದ ಪ್ರಕರಣ ಕಡಬ ಠಾಣಾ ವ್ಯಾಪ್ತಿಯ ಆತೂರಿನಲ್ಲಿ ಸೋಮವಾರ ಸಂಜೆ ನಡೆದಿದ್ದು, ಈ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಆತೂರು ಜನತಾ ಕಾಲನಿ ನಿವಾಸಿ ನವಾಝ್(29) ಚೂರಿ ಇರಿತಕ್ಕೊಳಗಾದ ಯುವಕ. ಈ ಸಂಬಂಧ ಆರೋಪಿ ನೌಫಲ್(29) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಸುಮಾರು ಆರು ತಿಂಗಳ ಹಿಂದೆ ಉಪ್ಪಿನಂಗಡಿಯಲ್ಲಿ ಮೀನು ವ್ಯಾಪಾರ ವಿಚಾರವಾಗಿ ನಡೆದ ಗಲಾಟೆ ಬಗ್ಗೆ ನೌಫಲ್ ನ ಸಹೋದರನ ಮಾಹಿತಿಯನ್ನು ನವಾಝ್ ಪೊಲೀಸರಿಗೆ ನೀಡಿದ್ದಾನೆ ಎಂದು ಆರೋಪಿಸಿ ಈ ಕೃತ್ಯ ಎಸಗಲಾಗಿದೆ ಎಂದು ದೂರಲಾಗಿದೆ. ಸೋಮವಾರ ಸಂಜೆ ಮಾತನಾಡಲಿಕ್ಕಿದೆ ಎಂದು ನವಾಝ್ ರನ್ನು ಆರೋಪಿ ನೌಫಲ್ ತನ್ನ ಅಂಗಡಿಗೆ ಕರೆಸಿ ಹೊಟ್ಟೆಗೆ ಚೂರಿಯಿಂದ ಇರಿದಿದ್ದಾನೆ ಎಂದು ನವಾಝ್ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಗಾಯಾಳು ನವಾಝ್ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಕಡಬ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News