ವಿದ್ಯಾರ್ಥಿಯ ಕೊಲೆ ಪ್ರಕರಣ: 7 ಮಂದಿ ವಶಕ್ಕೆ

Update: 2022-08-16 15:42 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಆ.16: ವಿದ್ಯಾರ್ಥಿಯ ಕೊಲೆಗೈದ ಪ್ರಕರಣ ಸಂಬಂಧ ಮುಖ್ಯ ಆರೋಪಿ ಸಾದ್ ಸೇರಿ ಏಳು ಮಂದಿಯನ್ನು ಕೆಜಿ ಹಳ್ಳಿ ಠಾಣಾ ಪೊಲೀಲೀಸರು ವಶಕ್ಕೆ ಪಡೆದಿದ್ದಾರೆ. 

ಕೆ.ಜಿ.ಹಳ್ಳಿಯ ಪ್ರೊವಿನ್ಸ್ ಕಾಲೇಜಿನಲ್ಲಿ ಆ.11 ರಂದು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ವೇಳೆ ಕಾಲೇಜಿನ ಮೊದಲನೇ ವರ್ಷದ ಬಿಕಾಂ ವಿದ್ಯಾರ್ಥಿ ಸಾದ್ ಭಾಗಿಯಾಗಿದ್ದ. ಸಾದ್ ನೃತ್ಯ ಮಾಡುತ್ತಿದ್ದಾಗ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಚುಡಾಯಿಸುತ್ತಿದ್ದರು.  ಇದರಿಂದ ಸಿಟ್ಟಿಗೆದ್ದ ಸಾದ್ ತನ್ನ ಏಳು ಸಂಗಡಿಗರೊಂದಿಗೆ ಸೇರಿ ಪಿಯುಸಿ ವಿದ್ಯಾರ್ಥಿಗಳೊಂದಿಗೆ ಜಗಳ ನಡೆಸಿ ಅರ್ಬಾಝ್‍ಗೆ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. 

ಅರ್ಬಾಝ್ ಕೆಳಗೆ ಬೀಳುತ್ತಿದ್ದಂತೆ ಸಾದ್‍ ಸೇರಿದಂತೆ ಹಲವು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದರು. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಕೆ.ಜಿ.ಹಳ್ಳಿ ಪೊಲೀಸರು ಇದೀಗ ಆರೋಪಿಗಳನ್ನು ವಶಕ್ಕೆಪಡೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News