ಪೋರ್ಟ್ ವಾರ್ಡ್ ಫ್ರೆಂಡ್ಸ್‌ನಿಂದ ಸ್ವಾತಂತ್ರ್ಯ ದಿನಾಚರಣೆ

Update: 2022-08-16 16:23 GMT

ಮಂಗಳೂರು : ನಗರದ ಬಂದರ್‌ನ ಪೋರ್ಟ್ ವಾರ್ಡ್ ಫ್ರೆಂಡ್ಸ್ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ, ಆರ್ಥಿಕವಾಗಿ ಹಿಂದುಳಿದ ಕುಟುಂಬಸ್ಥರಿಗೆ ಹೊಲಿಗೆ ಯಂತ್ರ ಹಾಗೂ ಮಹಿಳೆಯರಿಗೆ ಸೀರೆ ವಿತರಣೆಯು ಸೋಮವಾರ ನಡೆಯಿತು.

ಅದಲ್ಲದೆ ನಿವೃತ್ತ ಅಧ್ಯಾಪಕರಿಗೆ, ಸರಕಾರಿ ಇಲಾಖೆಯಲ್ಲಿ ಗುರುತರ ಸೇವೆಗೈದ ಅಧಿಕಾರಿಗಳಿಗೆ ಹಾಗೂ ಸಮಾಜ ಸೇವಕರಿಗೆ ಸನ್ಮಾನ ಕಾರ್ಯಕ್ರಮವು ನಡೆಯಿತು.

ಬದ್ರಿಯಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಎನ್.ಇಸ್ಮಾಯೀಲ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಮಂಗಳೂರು ಸಂಚಾರ ಉಪವಿಭಾಗದ ಎಸಿಪಿ ಗೀತಾ ಡಿ. ಕುಲಕರ್ಣಿ, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್., ಧರ್ಮದರ್ಶಿ ಹರಿಕೃಷ್ಣ ಪುನರೂರು, ಕಾರ್ಪೊರೇಟರ್ ಅಬ್ದುಲ್ ಲತೀಫ್ ಕಂದಕ್, ಬಂದರ್ ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿ ಡಾ. ಚಂದ್ರಪ್ರಭಾ ಬಿ. ಅನುಪಮ ಬಬ್ಬುಕಟ್ಟೆ, ಜಿ. ಹನುಮಂತ ಕಾಮತ್, ಸುರೇಂದ್ರ ರೈ, ನಿವೃತ್ತ ಮುಖ್ಯಶಿಕ್ಷಕ ಮುಹಮ್ಮದ್ ಇಕ್ಬಾಲ್, ನಿವೃತ್ತ ದೈಹಿಕ ಶಿಕ್ಷಕ ಕಾರ್ಯಪ್ಪ ರೈ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News