ಕದ್ರಿ ಸರ್ಕಲ್ ಅವ್ಯವಸ್ಥೆ ವಿರುದ್ದ ಏಕಾಂಗಿ ಪ್ರತಿಭಟನೆ

Update: 2022-08-16 16:27 GMT

ಮಂಗಳೂರು: ನಗರದ ಕದ್ರಿ ಸರ್ಕಲ್ ರಸ್ತೆಯ ಅವ್ಯವಸ್ಥೆಯ ವಿರುದ್ಧ ಸಾಮಾಜಿಕ ಕಾರ್ಯಕರ್ತ ಜೆರಾರ್ಡ್ ಟವರ್ಸ್ ಮಂಗಳವಾರ ಕದ್ರಿ ಸರ್ಕಲ್ ಬಳಿ ಏಕಾಂಕಿಯಾಗಿ ಪ್ರತಿಭಟನೆ ನಡೆಸಿ ಗಮನ ಸೆಳೆದರು.

ಕಳೆದ ನಾಲ್ಕೈದು ತಿಂಗಳಿನಿಂದ ಸಂಬಂಧಪಟ್ಟ ಅಧಿಕಾರಿಗಳ, ಜನಪ್ರತಿನಿಧಿಗಳ ಗಮನ ಸೆಳೆದರೂ ಸ್ಪಂದನ ಸಿಗದ ಕಾರಣ ಜೆರಾರ್ಡ್ ಟವರ್ಸ್ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭ ಸ್ಥಳೀಯ ರಿಕ್ಷಾ ಮತ್ತು ಟೆಂಪೋ ಚಾಲಕರು ಸಾಥ್ ನೀಡಿದರು.

ಸುಮಾರು ಅರ್ಧ ಗಂಟೆ ಪ್ರತಿಭಟನೆ ನಡೆದ ಬಳಿಕ ತಾತ್ಕಾಲಿಕವಾಗಿ ದುರಸ್ತಿ ಕಾರ್ಯ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜೆರಾರ್ಡ್ ಟವರ್ಸ್ ‘ಇಂತಹ ತೇಪೆ ಕಾಮಗಾರಿಯಿಂದ ಯಾವ ಪ್ರಯೋಜನವೂ ಇಲ್ಲ. ವೈಜ್ಞಾನಿಕವಾಗಿ ಕಾಮಗಾರಿ ನಡೆಸಿದರೆ ಮಾತ್ರ ಸಮಸ್ಯೆಗೆ ಪರಿಹಾರ ಸಿಗಲಿದೆ. ಆವರೆಗೂ ಹೋರಾಟ ಮುಂದುವರಿಯಲಿದೆ’ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News