ಸಜಹ ಸ್ಥಿತಿಗೆ ಮರಳಿದ ಶಿವಮೊಗ್ಗ ನಗರ; ಆ.17ರಂದು ಶಾಲೆ- ಕಾಲೇಜು ಪುನಾರಂಭ

Update: 2022-08-16 18:16 GMT
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ

ಶಿವಮೊಗ್ಗ, ಆ.16: ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣಗಳಲ್ಲಿ ಶಾಲೆ, ಕಾಲೇಜುಗಳು ಪುನಾರಂಭ ಮಾಡಲು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ನೀಡಿದ್ದಾರೆ.

ಬುಧವಾರದಿಂದ ಶಿವಮೊಗ್ಗ ಮತ್ತು ಭದ್ರಾವತಿ ಪಟ್ಟಣಗಳಲ್ಲಿ ಶಾಲೆ, ಕಾಲೇಜುಗಳು ಎಂದಿನಂತೆ ಆರಂಭವಾಗಲಿದೆ.ತರಗತಿಗಳನ್ನು ನಡೆಸಲು ಜಿಲ್ಲಾಧಿಕಾರಿ ಅವರು ಆದೇಶ ನೀಡಿದ್ದಾರೆ. 

ಸಾವರ್ಕರ್ ಭಾವಚಿತ್ರ ವಿವಾದ ಸಂಬಂಧ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

ಮುಂಜಾಗ್ರತಾ ಕ್ರಮವಾಗಿ ಮಂಗಳವಾರ ಒಂದು ದಿನ ರಜೆ ಘೋಷಣೆ ಮಾಡಲಾಗಿತ್ತು. ಆ.17ರಂದು ಶಾಲಾ ಕಾಲೇಜುಗಳಲ್ಲಿ ಎಂದಿನಂತೆ ತರಗತಿಗಳು‌‌ ಪ್ರಾರಂಭವಾಗಲಿವೆ. 
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News