ಚುನಾವಣೆಗೆ ಕೆಲವೇ ತಿಂಗಳು ಬಾಕಿ: ಹಿಮಾಚಲ ಪ್ರದೇಶ, ಗುಜರಾತ್ ಕಾಂಗ್ರೆಸ್ ಮುಖಂಡರು ಬಿಜೆಪಿಗೆ ಸೇರ್ಪಡೆ
ಹೊಸದಿಲ್ಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣೆಗೆ ಕೆಲವು ತಿಂಗಳುಗಳಷ್ಟೇ ಉಳಿದಿರುವಾಗ ಎರಡು ರಾಜ್ಯಗಳ ನಾಲ್ವರು ಕಾಂಗ್ರೆಸ್ ನಾಯಕರು ಬುಧವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಹಿಮಾಚಲ ಪ್ರದೇಶದ ಮಾಜಿ ಕಾಂಗ್ರೆಸ್ ಶಾಸಕರಾದ ಪವನ್ ಕುಮಾರ್ ಕಾಜಲ್ ಮತ್ತು ಲಖ್ವಿಂದರ್ ಸಿಂಗ್ ರಾಣಾ ಅವರನ್ನು ರಾಜ್ಯದ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರ ಸಮ್ಮುಖದಲ್ಲಿ ದಿಲ್ಲಿಯ ಪ್ರಧಾನ ಕಛೇರಿಯಲ್ಲಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. ಕಾಜಲ್ ಮತ್ತು ರಾಣಾ ಬುಧವಾರ ಮಧ್ಯಾಹ್ನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಅವರ ಮನೆಯಲ್ಲಿ ಭೇಟಿಯಾದರು.
"ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ" ತೊಡಗಿಸಿಕೊಂಡಿದ್ದಕ್ಕಾಗಿ ಕಾಜಲ್ ಮತ್ತು ರಾಣಾ ಅವರನ್ನು ಆರು ವರ್ಷಗಳ ಕಾಲ ಅವರ ಪಕ್ಷದ ಸದಸ್ಯತ್ವದಿಂದ ಕಾಂಗ್ರೆಸ್ ಕಿತ್ತುಹಾಕಿದ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ ಎಂದು ಎಎನ್ಐ ವರದಿ ಮಾಡಿದೆ.
ಬಿಜೆಪಿ ಆಡಳಿತವಿರುವ ಹಿಮಾಚಲ ಪ್ರದೇಶದಲ್ಲಿ ನವೆಂಬರ್ನಲ್ಲಿ ಚುನಾವಣೆ ನಡೆಯಲಿದೆ.
ಈ ಮಧ್ಯೆ ಗುಜರಾತ್ನಲ್ಲಿ ಮಾಜಿ ಸಚಿವ ನರೇಶ್ ರಾವಲ್ ಮತ್ತು ಮಾಜಿ ರಾಜ್ಯಸಭಾ ಸದಸ್ಯ ರಾಜು ಪರ್ಮಾರ್ ಬುಧವಾರ ಬೆಳಗ್ಗೆ ಬಿಜೆಪಿಗೆ ಸೇರ್ಪಡೆಗೊಂಡರು. ರಾವಲ್ ಮತ್ತು ಪರ್ಮಾರ್ ಎರಡು ವಾರಗಳ ಹಿಂದೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು.
ಬಿಜೆಪಿಯ ಗುಜರಾತ್ ಘಟಕದ ಮುಖ್ಯಸ್ಥ ಸಿಆರ್ ಪಾಟೀಲ್ ಅವರನ್ನು ಬುಧವಾರ ಪಕ್ಷಕ್ಕೆ ಸೇರಿಸಿಕೊಂಡರು.
ಜೂನ್ನಲ್ಲಿ ಹಾರ್ದಿಕ್ ಪಟೇಲ್ ಬಿಜೆಪಿಗೆ ಸೇರ್ಪಡೆಗೊಂಡ ನಂತರ ಕಾಂಗ್ರೆಸ್ಗೆ ಆಘಾತ ಉಂಟಾಗಿತ್ತು. ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿಗಾಗಿ ಪಾಟಿದಾರ್ ಸಮುದಾಯದ ಆಂದೋಲನದ ನೇತೃತ್ವ ವಹಿಸಿದ್ದ ಪಟೇಲ್ ಅವರು ಮೇ 18 ರಂದು ಕಾಂಗ್ರೆಸ್ಗೆ ರಾಜೀನಾಮೆ ನೀಡಿದ್ದರು.
ಗುಜರಾತ್ನಲ್ಲಿ ಡಿಸೆಂಬರ್ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.
Shri Pawan Kumar Kajal and Shri Lakhvinder Singh Rana joins BJP in presence of Himachal Pradesh CM Shri @jairamthakurbjp at party headquarters in New Delhi. #JoinBJP https://t.co/TCPBAj7eXj
— BJP (@BJP4India) August 17, 2022
પ્રદેશ કાર્યાલય 'શ્રી કમલમ્' ખાતે પ્રદેશ અધ્યક્ષ શ્રી @CRPaatil ની વિશેષ ઉપસ્થિતિમાં કોંગ્રેસના આગેવાન શ્રી નરેશભાઈ રાવલ અને શ્રી રાજુભાઈ પરમાર તથા તેમના સમર્થકો ભારતીય જનતા પાર્ટીમાં જોડાયા. pic.twitter.com/s3vILW5vwK
— BJP Gujarat (@BJP4Gujarat) August 17, 2022