ಆ.22ರಿಂದ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Update: 2022-08-17 15:03 GMT

ಮಂಗಳೂರು, ಆ.17: ಸರಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ ಅಥವಾ ನೌಕರರ ವಿರುದ್ಧ ಸಾರ್ವಜನಿಕರಿಂದ ದೂರು ಪಡೆಯಲು ಕರ್ನಾಟಕ ಲೋಕಾಯುಕ್ತದ ಮಂಗಳೂರು ವಿಭಾಗದ ಪೊಲೀಸ್ ಅಧೀಕ್ಷಕರು, ಉಪಾಧೀಕ್ಷಕರು, ನಿರೀಕ್ಷಕರು ಆ.22ರಿಂದ ಜಿಲ್ಲೆಯ ವಿವಿಧ ತಾಲೂಕುಗಳ ಪ್ರವಾಸಕೈಗೊಂಡಿದ್ದಾರೆ.

ಆ.22ರಂದು ಪೂ.11ರಿಂದ ಮಧ್ಯಾಹ್ನ 1ರವರೆಗೆ ಮಂಗಳೂರು ತಾಲೂಕು ಕಚೇರಿಯಲ್ಲಿ, ಆ.23ರ ಪೂ.11ರಿಂದ ಮಧ್ಯಾಹ್ನ 1 ರವರೆಗೆ ಬಂಟ್ವಾಳ ತಾಲೂಕು ಕಚೇರಿಯಲ್ಲಿ, ಆ.24ರ ಪೂ.11 ರಿಂದ ಮಧ್ಯಾಹ್ನ 1 ರವರೆಗೆ ಪುತ್ತೂರು ತಾಲೂಕು ಕಚೇರಿಯಲ್ಲಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಲಿದ್ದಾರೆ.

ಮಾಹಿತಿಗೆ ಪೊಲೀಸ್ ಅಧೀಕ್ಷಕರ ಕಚೇರಿ ದೂ.ಸಂ: 0824-2950997, 9243456629, ಉಪಾಧೀಕ್ಷಕರ-1 ಕಚೇರಿ ದೂ.ಸಂ: 0824-2453420, 9448635348, ಉಪಾಧೀಕ್ಷಕರ-2 ಕಚೇರಿ ದೂ.ಸಂ:0824-2453420, 7019967061, ನಿರೀಕ್ಷಕರ ಕಚೇರಿ ದೂ.ಸಂ:0824-2427237, 9448461816ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News