ಮಡಿಕೇರಿ | ನನ್ನ ವಿರುದ್ಧದ ಪ್ರತಿಭಟನೆ ಹೇಡಿಗಳ ಕೆಲಸ: ಸಿದ್ದರಾಮಯ್ಯ ವಾಗ್ದಾಳಿ

Update: 2022-08-18 11:54 GMT

ಮಡಿಕೇರಿ: 'ಕಪ್ಪು ಬಾವುಟ ಪ್ರದರ್ಶಿಸಿ, ಧಿಕ್ಕಾರ ಘೋಷಣೆ ಕೂಗಿ ಪ್ರತಿಭಟನೆ ಮಾಡಿದ್ದು ಹೇಡಿಗಳ ಕೆಲಸ' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ''ಈ ಬಾರಿ ಚುನಾವಣೆಯಲ್ಲಿ ಇಲ್ಲಿನ ಎರಡೂ ವಿಧಾನಸಭೆ ಕ್ಷೇತ್ರಗಳನ್ನು ನಾವು ಗೆಲ್ಲಲಿದ್ದೇವೆ. ಇದರಿಂದ ಹತಾಶರಾಗಿ ಬಿಜೆಪಿಯವರು ಹಣ ಕೊಟ್ಟು ಜನರನ್ನು ಕರೆದುಕೊಂಡು ಬಂದು ಘೋಷಣೆ ಕೂಗಿಸಿದ್ದಾರೆ'' ಎಂದು ಕಿಡಿಕಾರಿದರು. 

'ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಭಟನೆ ನಡೆಸೋದಕ್ಕೆ ಎಲ್ಲರಿಗೂ ಅವಕಾಶ ಇದೆ. ಈ ಹಿಂದೆ ಹಲವು ಬಾರಿ ನಾನು ಕೊಡಗಿಗೆ ಬಂದಿದ್ದಾಗ ಇವರು ಯಾಕೆ ಪ್ರತಿಭಟನೆ ಮಾಡಿಲ್ಲ ಎಂದು ಪ್ರಶ್ನಿಸಿದ ಅವರು, ಕೊಡಗಿನಲ್ಲಿ ಸಮರ್ಪಕವಾಗಿ ಪರಿಹಾರ ನೀಡಿಲ್ಲ. ಜಿಲ್ಲಾಧಿಕಾರಿ ಕಚೇರಿ ತಡೆಗೋಡೆ ಕಳಪೆಯಾಗಿದೆ. ಇದು ನನಗೆ ಗೊತ್ತಾಗಬಾರದು ಎಂದೇ ಪ್ರತಿಭಟನೆ ಮಾಡಿದ್ದಾರೆ'' ಎಂದರು. 

ಇದನ್ನೂ ಓದಿ: ಕೊಡಗು: ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶಿಸಿದ BJP ಯುವ ಮೋರ್ಚಾ ಕಾರ್ಯಕರ್ತರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News