ರಾಜ್ಯದ 7 ಕಡೆ ‘ಜನೋತ್ಸವ ಸಮಾವೇಶ': ನಳಿನ್ ಕುಮಾರ್ ಕಟೀಲ್

Update: 2022-08-18 14:16 GMT

ಬೆಂಗಳೂರು: 'ಮುಂದಿನ ಒಂದು ತಿಂಗಳ ರಾಜ್ಯ ಪ್ರವಾಸ ಕುರಿತು ನಿರ್ಧರಿಸಲಾಯಿತು. ಮುಖ್ಯಮಂತ್ರಿ ಮತ್ತು ರಾಜ್ಯಾಧ್ಯಕ್ಷರು ತಲಾ 50 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಮಾಡಬೇಕೆಂದು ಸಭೆಯಲ್ಲಿ ನಿರ್ಧರಿಸಲಾಗಿದೆ. ಸೆಪ್ಟೆಂಬರ್ ಮೊದಲ ವಾರದಿಂದ ಅಕ್ಟೋಬರ್ ಮಧ್ಯಭಾಗದವರೆಗೆ ಕರ್ನಾಟಕದ ಏಳು ಕಡೆ ಬೃಹತ್ ‘ಜನೋತ್ಸವ ಸಮಾವೇಶ' ಹಮ್ಮಿಕೊಳ್ಳಲು ನಿರ್ಧರಿಸಲಾಗಿದೆ. ದೊಡ್ಡಬಳ್ಳಾಪುರದಲ್ಲಿ ಮೊದಲ ಜನೋತ್ಸವ ಸಮಾವೇಶ ನಡೆಯಲಿದೆ' ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂದಿನ ರಾಜ್ಯ ಕಾರ್ಯಕಾರಿಣಿಯನ್ನು ಸೆಪ್ಟೆಂಬರ್ 10 ಮತ್ತು 11ರಂದು ಬೆಂಗಳೂರಿನಲ್ಲಿ ನಡೆಸಲು ನಿರ್ಧರಿಸಲಾಗಿದೆ. 3 ತಿಂಗಳಿಗೊಮ್ಮೆ ಈ ಕಾರ್ಯಕಾರಿಣಿ ನಡೆಯುತ್ತಿದೆ. ವಿಧಾನಸಭೆ ಚುನಾವಣೆಯಲ್ಲಿ 145ಕ್ಕೂ ಹೆಚ್ಚು ಸ್ಥಾನ ಗೆಲ್ಲಲು ಪ್ರಧಾನಿ ಮೋದಿಯವರ ಪಂಚ ಸಂಕಲ್ಪಗಳು ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪಂಚ ಯೋಜನೆಗಳನ್ನು ಬಳಸಿಕೊಳ್ಳಬೇಕು. ಈ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು' ಎಂದು ಅವರು ತಿಳಿಸಿದರು.

------------------------------------------

‘ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪಕ್ಷ ಕೇಂದ್ರ ಸಂಸದೀಯ ಮಂಡಳಿಗೆ ನೇಮಕ ಮಾಡಿದ್ದರಿಂದ ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಆನೆ ಬಲ ಬಂದಂತಾಗಿದೆ. ಕರ್ನಾಟಕದ ರಾಜಕೀಯದಲ್ಲಿ ಮಹತ್ತರವಾದ ಕಾರ್ಯವನ್ನು ನಿರ್ವಹಿಸುವ ಅವಕಾಶವಾಗಿದೆ'

-ಅರುಣ್ ಸಿಂಗ್ ಬಿಜೆಪಿ ಉಸ್ತುವಾರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News