ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ: ಇಂತಹ ಘಟನೆಗಳು ನಡೆಯಬಾರದು ಎಂದ ಬಿಎಸ್ ವೈ

Update: 2022-08-18 14:23 GMT

ಬೆಂಗಳೂರು :  ಮಡಕೇರಿ ನಗರದ ತಿಮ್ಮಯ್ಯ ಸರ್ಕಲ್‌ನಲ್ಲಿ ಮಾಜಿ ಸಿಎಂ  ಸಿದ್ದರಾಮಯ್ಯ (Siddaramaiah) ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ (B. S. Yediyurappa) ಪ್ರತಿಕ್ರಿಯಿಸಿದ್ದಾರೆ. 

ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,   'ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯಬಾರದು. ಅದು ಸಿದ್ದರಾಮಯ್ಯ ಇರಲಿ, ಯಡಿಯೂರಪ್ಪ ಇರಲಿ, ಅಥವಾ ಇನ್ಯಾರೇ ಆಗಿರಲಿ.  ಇಂತಹ ಘಟನೆಗಳು ನಡೆಯಬಾರದು. ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾರೆ. ಎಲ್ಲರೂ ಗೌರವದಿಂದ ನಡೆದುಕೊಳ್ಳಬೇಕು. ಈ ರೀತಿಯ ನಡವಳಿಕೆಯನ್ನು ಯಾವುದೇ ಕಾರಣಕ್ಕೂ ಸಹಿಸಕೂಡದು,  ಈ ರೀತಿ ಯಾರೂ ಮಾಡಬಾರದು ಅಂತ ವಿನಂತಿ ಮಾಡುತ್ತೇನೆ' ಎಂದು ತಿಳಿಸಿದರು. 

ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಕೊಡಗಿಗೆ ಗುರುವಾರ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮಡಿಕೇರಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು, ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದ್ದರು. 

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News