ಪೊಲೀಸರ ವೈಫಲ್ಯ ಖಂಡಿಸಿ ಆ.26ರಂದು ಮಡಿಕೇರಿ ಎಸ್‍ಪಿ ಕಚೇರಿ ಎದುರು ಪ್ರತಿಭಟನೆಗೆ ಸಿದ್ದರಾಮಯ್ಯ ಕರೆ

Update: 2022-08-18 16:12 GMT

ಮಡಿಕೇರಿ ಆ.18 : ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಆಗಮಿಸಿದ ಸಂದರ್ಭ ತಮ್ಮ ವಿರುದ್ಧ ನಡೆದ ಪ್ರತಿಭಟನೆಗಳ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆ.26 ರಂದು ಎಸ್‍ಪಿ ಕಚೇರಿ ಎದುರು ಪ್ರತಿಭಟನೆ ನಡೆಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.

ಸೋಮವಾರಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪೊಲೀಸ್ ವೈಫಲ್ಯದಿಂದ ಈ ರೀತಿಯ ಪ್ರತಿಭಟನೆಗಳು ನಡೆದಿವೆ, ಬಿಜೆಪಿಯೊಂದಿಗೆ ಪೊಲೀಸರು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.

ಪೊಲೀಸರ ವೈಫಲ್ಯ ಖಂಡಿಸಿ ಆ.26 ರಂದು ಮಡಿಕೇರಿಯಲ್ಲಿ ಎಸ್‍ಪಿ ಕಚೇರಿ ಎದುರು ಕಾಂಗ್ರೆಸ್ ಪ್ರತಿಭಟನೆ ನಡೆಸಲಿದ್ದು, ತಾವೂ ಭಾಗಿಯಾಗುವುದಾಗಿ ತಿಳಿಸಿದರು.  

ಪ್ರತಿಭಟನೆಯ ಬಿಸಿ : ಸಿದ್ದರಾಮಯ್ಯ ಅವರು ಸೋಮವಾರಪೇಟೆಯಲ್ಲೂ ಪ್ರತಿಭಟನೆಯ ಬಿಸಿ ಎದುರಿಸಬೇಕಾಯಿತು. ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರು ಜೂನಿಯರ್ ಕಾಲೇಜು ಬಳಿ ಪ್ರತಿಭಟನೆ ನಡೆಸಿ ಘೋಷಣೆಗಳನ್ನು ಕೂಗಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News