ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ: ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

Update: 2022-08-18 18:03 GMT

ಬೆಂಗಳೂರು: ಮಡಿಕೇರಿಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆಗೆ ಸಂಬಂಧಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj S Bommai) ಪ್ರತಿಕ್ರಿಯಿಸಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ , 'ಸಿದ್ದರಾಮಯ್ಯ ಅವರು, ವಿರೋಧ ಪಕ್ಷದ ನಾಯಕರಾಗಿದ್ದು, ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ತನ್ನದೇ ಆದ ಗೌರವ ಇರುತ್ತದೆ. ಯಾವುದೇ ವಿಷಯದ ಬಗ್ಗೆ ಬಿನ್ನಾಭಿಪ್ರಾಯವಿದ್ದರೆ ಅದನ್ನು ಬಲವಾದ ಅಭಿಪ್ರಾಯಗಳೊಂದಿಗೆ ವಿರೋಧಿಸಬೇಕು. ಯಾವುದೇ ದೈಹಿಕ ಕಾರ್ಯದಿಂದಲ್ಲ. ಇದನ್ನು ಎಲ್ಲರೂ ಪಾಲಿಸಬೇಕು' ಎಂದು ಹೇಳಿದ್ದಾರೆ.

ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಲು ಕೊಡಗಿಗೆ ಗುರುವಾರ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮಡಿಕೇರಿ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದು, ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸಿದ್ದರು. 

ಇದನ್ನೂ ಓದಿ:  ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಪ್ರಕರಣ: ಇಂತಹ ಘಟನೆಗಳು ನಡೆಯಬಾರದು ಎಂದ ಬಿಎಸ್ ವೈ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News