ರಾಜ್ಯದಲ್ಲಿ ರವಿವಾರ 720 ಮಂದಿಗೆ ಕೊರೋನ ದೃಢ, ಇಬ್ಬರು ಮೃತ್ಯು

Update: 2022-08-21 17:56 GMT

ಬೆಂಗಳೂರು, ಆ.21: ರಾಜ್ಯದಲ್ಲಿ ರವಿವಾರ 720 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. ಇಬ್ಬರು ಮೃತಪಟ್ಟಿದ್ದು, 662 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 40,40,831ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,157ಕ್ಕೆ ತಲುಪಿದೆ.        
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 10,508ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.  

ಇಬ್ಬರ ಸಾವು: ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಬಳ್ಳಾರಿ 1, ಶಿವಮೊಗ್ಗ ಜಿಲ್ಲೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ.  

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 720 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 12, ಬಳ್ಳಾರಿ 31, ಬೆಳಗಾವಿ 16, ಬೆಂಗಳೂರು ಗ್ರಾಮಾಂತರ 15, ಬೆಂಗಳೂರುನಗರ 273, ಚಾಮರಾಜನಗರ 8, ಚಿಕ್ಕಬಳ್ಳಾಪುರ 11, ಚಿಕ್ಕಮಗಳೂರು 30, ಚಿತ್ರದುರ್ಗ 2, ದಕ್ಷಿಣಕನ್ನಡ 12, ದಾವಣಗೆರೆ 7, ಧಾರವಾಡ 25, ಗದಗ 2, ಹಾಸನ 63, ಹಾವೇರಿ 12, ಕಲಬುರಗಿ 9, ಕೊಡಗು 29, ಕೋಲಾರ 17, ಕೊಪ್ಪಳ 6, ಮಂಡ್ಯ 14, ಮೈಸೂರು 43, ರಾಯಚೂರು 19, ರಾಮನಗರ 2, ಶಿವಮೊಗ್ಗ 15, ತುಮಕೂರು 14, ಉಡುಪಿ 10, ಉತ್ತರಕನ್ನಡ 20, ವಿಜಯಪುರ ಜಿಲ್ಲೆಯಲ್ಲಿ 3 ಪ್ರಕರಣ ಪತ್ತೆಯಾಗಿವೆ. 
 
ರಾಜಧಾನಿಯಲ್ಲಿ 273 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ರವಿವಾರದಂದು 273  ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 427 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 18,58,017   ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,980 ಜನರು ಸೋಂಕಿಗೆ ಬಲಿಯಾಗಿದ್ದಾರೆ. 

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News