ವಿಜಯಪುರ | ಕಾಂಗ್ರೆಸ್ ಕಚೇರಿಗೆ ಸಾವರ್ಕರ್ ಭಾವಚಿತ್ರ ಅಂಟಿಸಿದ್ದು ನಾನೇ: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ

Update: 2022-08-22 06:54 GMT
ಬಿಜೆಪಿ ವಿಜಯಪುರ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ

ವಿಜಯಪುರ, ಆ.22: "ಜಿಲ್ಲಾ ಕಾಂಗ್ರೆಸ್ ಕಚೇರಿಯ ಗೋಡೆ, ಕಿಟಕಿ ಮೇಲೆ ಸಾವರ್ಕರ್ ಭಾವಚಿತ್ರ ಅಂಟಿಸಿರುವುದು ನಾನೇ" ಎಂದು ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಹೂಗಾರ ಹೇಳಿಕೊಂಡಿದ್ದಾರೆ.

ನಗರದಲ್ಲಿಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಪದೇ ಪದೇ ಸಾವರ್ಕರ್ ಅವರನ್ನು ಸ್ವಾತಂತ್ರ್ಯ ಹೋರಾಟಗಾರ ಅಲ್ಲ ಎಂದು ಹೇಳಿಕೆ ನೀಡುವ ಮೂಲಕ ಅವಮಾನ ಮಾಡುತ್ತಿದ್ದಾರೆ. ಅಲ್ಲದೇ, ಸಾವರ್ಕರ್ ಫೋಟೊ ಸುಟ್ಟು ಹಾಕಿದ್ದಾರೆ. ಇದನ್ನು ಖಂಡಿಸಿ ಕಾಂಗ್ರೆಸ್ ಕಚೇರಿ ಮೇಲೆ ಫೋಟೊ ಅಂಟಿಸಿದ್ದೇನೆ ಎಂದರು.

ಕಾಂಗ್ರೆಸ್ ನವರು ಸಾವರ್ಕರ್ ಬಗ್ಗೆ ಅಪಪ್ರಚಾರ ನಿಲ್ಲಿಸಬೇಕು, ಇಲ್ಲವಾದರೆ ಕಾಂಗ್ರೆಸ್ ನಾಯಕರ ಮನೆ ಮೇಲೆ ಫೋಟೊ ಅಂಟಿಸಬೇಕಾಗುತ್ತದೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ವಿಜಯಪುರ | ಸಾವರ್ಕರ್ ಫೋಟೊ ಅಂಟಿಸಿದ ಆರೋಪಿಯ ಶೀಘ್ರ ಬಂಧನಕ್ಕೆ ಕಾಂಗ್ರೆಸ್ ಆಗ್ರಹ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News