ಪ್ರವಾದಿ ನಿಂದನೆ ಪ್ರಕರಣ: ಬಿಜೆಪಿ ಶಾಸಕ ರಾಜಾ ಸಿಂಗ್ ಗೆ ಜಾಮೀನು

Update: 2022-08-23 15:57 GMT

ಹೈದರಾಬಾದ್: ತೆಲಂಗಾಣ ಬಿಜೆಪಿ(BJP) ಶಾಸಕ ಟಿ ರಾಜಾ ಸಿಂಗ್(T Raja Singh) ಅವರನ್ನು ಬಂಧಿಸಿದ ಕೆಲವೇ ಗಂಟೆಗಳಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಅವರನ್ನು ಬಿಡುಗಡೆ ಮಾಡಲು ಆದೇಶಿಸಿದೆ.

ಬಂಧನದ ಸಂದರ್ಭದಲ್ಲಿ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ಸೆಕ್ಷನ್ 41 ಅನ್ನು ಅನುಸರಿಸಿಲ್ಲ ಎಂದು ಗಮನಿಸಿದ ನಂತರ ನ್ಯಾಯಾಲಯ ಅವರನ್ನು ಬಿಡುಗಡೆ ಮಾಡಲು ಆದೇಶಿಸಿದೆ ಎಂದು ವರದಿಯಾಗಿದೆ.

ಪ್ರವಾದಿ ಮುಹಮ್ಮದ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳ ಆರೋಪದ ಮೇಲೆ ಶಾಸಕ ರಾಜಾಸಿಂಗ್ ಮೇಲೆ ಪ್ರಕರಣ ದಾಖಲಿಸಿ ಬಂಧಿಸಲಾಗಿತ್ತು.

ಇದನ್ನೂ ಓದಿ: NDTVಯ ಶೇ. 29ರಷ್ಟು ಶೇರು ಖರೀದಿಸಿದ ಅದಾನಿ ಸಮೂಹ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News