×
Ad

ರಸ್ತೆಗೆ ಅಡ್ಡ ಬಂದ ನಾಯಿ; ನಿಯಂತ್ರಣ ತಪ್ಪಿದ ಆಟೊ ಮರಕ್ಕೆ ಢಿಕ್ಕಿ ಹೊಡೆದು ಚಾಲಕ‌ ಮೃತ್ಯು

Update: 2022-08-24 19:56 IST

ಉಡುಪಿ ; ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಆಟೊ ರಿಕ್ಷಾವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆಟೊ ಚಾಲಕ‌ ಮೃತಪಟ್ಟ ಘಟನೆ ಉಪ್ಪೂರು ಗ್ರಾಮದ ಅಮ್ಮುಜೆ ರೈಲ್ವೆ ಒವರ್ ಬ್ರಿಡ್ಜ್ ಬಳಿ‌ ಆ.23ರಂದು ನಡೆದಿದೆ.

ಮೃತನನ್ನು‌ ಆಟೊ ಚಾಲಕಗಣೇಶ್ ಪೂಜಾರಿ (53) ಎಂದು ಗುರುತಿಸಲಾಗಿದೆ. ಇವರು ತನ್ನ ಆಟೊ ರಿಕ್ಷಾವನ್ನು ಹಾವಂಜೆ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದು, ಅಮ್ಮುಜೆ ರೈಲ್ವೆ ಒವರ್ ಬ್ರಿಡ್ಜ್ ನ ಸ್ವಲ್ಪ ಮುಂದೆ ನಾಯಿಯೊಂದು ರಸ್ತೆಗೆ ಅಡ್ಡ ಬಂದಿದೆ. ಇದನ್ನು ತಪ್ಪಿಸಲು ಹೋದ ವೇಳೆ ನಿಯಂತ್ರಣ ತಪ್ಪಿದ ರಿಕ್ಷಾ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಗಣೇಶ್ ಅವರನ್ನು‌ ಉಡುಪಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಅಲ್ಲಿ ಪರೀಕ್ಷಿಸಿದ ವೈದ್ಯರು ಗಣೇಶ್ ಅವರು ಅದಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News