ಪ್ರವಾದಿ ಅವಹೇಳನ ಪ್ರಕರಣ: ಜಾಮೀನು ಪಡೆದ ಎರಡು ದಿನದ ಬಳಿಕ ಮತ್ತೊಮ್ಮೆ ರಾಜಾ ಸಿಂಗ್‌ ಬಂಧನ

Update: 2022-08-25 10:32 GMT
Photo: Facebook

ಹೈದರಾಬಾದ್: ಪ್ರವಾದಿ ಮುಹಮ್ಮದ್‌ ರವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್(Raja singh) ಅವರನ್ನು ಗುರುವಾರ ಮತ್ತೊಮ್ಮೆ ಬಂಧಿಸಲಾಗಿದೆ(Arrested Again).

ಸೋಮವಾರ, ಬಿಜೆಪಿ ಶಾಸಕರು ಇತ್ತೀಚೆಗೆ ನಗರದಲ್ಲಿ ಪ್ರದರ್ಶನ ನೀಡಿದ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಮುನವ್ವರ್‌ ಫಾರೂಕಿಯನ್ನು ಟೀಕಿಸುವ ವೀಡಿಯೊವನ್ನು ಬಿಡುಗಡೆ ಮಾಡಿದರು. ಅದರಲ್ಲಿ ಇಸ್ಲಾಂ ಧರ್ಮದ ವಿರುದ್ಧ ಮತ್ತು ಪ್ರವಾದಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದರು.

ರಾಜಾ ಸಿಂಗ್ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮದ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು, ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧಾರ್ಮಿಕ ಭಾವನೆಗಳನ್ನು ಅದರ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಮತ್ತು ಇತರರಲ್ಲಿ ಕ್ರಿಮಿನಲ್ ಬೆದರಿಕೆ ಹಾಕುವ ಉದ್ದೇಶ ಮುಂತಾದ ಪ್ರಕರಣಗಳೊಂದಿಗೆ ಎಫ್‌ಐಆರ್ ದಾಖಲಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News